ಮನೆ ರಾಜ್ಯ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ: ರಾಮಲಿಂಗಾರೆಡ್ಡಿ

ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ: ರಾಮಲಿಂಗಾರೆಡ್ಡಿ

0

ಚಿಕ್ಕಬಳ್ಳಾಪುರ: ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ, ಆ ಪಕ್ಷದಲ್ಲಿ ಶಿಸ್ತು ಇಲ್ಲ. ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

Join Our Whatsapp Group

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಅನಂತ್ ಕುಮಾರ್ ಪಕ್ಷ ಕಟ್ಟಿದ್ರು. ರಾಜ್ಯದಲ್ಲಿ ಬಿಜೆಪಿ ಕಥೆ ಮುಗಿಯಿತು ಎಂದು ಹೇಳಿದರು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿಗೆ 50-60 ಸ್ಥಾನ ಬಂದರೆ ಹೆಚ್ಚು. ವಿವಿಧ ಪಕ್ಷಗಳ ಮುಖಂಡರುಗಳನ್ನು ಯಡಿಯೂರಪ್ಪ ಬಿಜೆಪಿಗೆ ಕರೆ ತಂದಿದ್ದರು. ಆದರೆ ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ. ಬಿಜೆಪಿಗೆ ಭವಿಷ್ಯವಿಲ್ಲ ಅಂತಾ ನಾಯಕರಿಗೆ ಮನವರಿಕೆಯಾಗಿದೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬರುತ್ತದೆ. ಕಾಂಗ್ರೆಸ್ 120ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಬಿಜೆಪಿ ಕಚ್ಚಾಟದಿಂದ ಕಾಂಗ್ರೆಸ್ ಗೆ 150 ಸ್ಥಾನ ಬಂದ್ರೂ ಆಶ್ಚರ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಂದಿನ ಲೇಖನವಿಧಾನಸಭಾ ಚುನಾವಣೆ: 1,510 ಕೋಟಿ ಆಸ್ತಿ ಘೋಷಿಸಿದ ಎಂಟಿಬಿ ನಾಗರಾಜ್‌  
ಮುಂದಿನ ಲೇಖನಬಿಜೆಪಿ ಪಕ್ಷದ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ