ಮನೆ ರಾಜ್ಯ ನಾಳೆ ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ

ನಾಳೆ ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ

0

ಚಿತ್ರದುರ್ಗ (Chitradurga): ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಾಳೆ (ಸೆ.5) ರಂದು ಸಾಮೂಹಿಕ ವಿವಾಹ ಮಹೋತ್ಸವ ನಡೆಯಲಿದೆ.

ಕರ್ತಗದ್ದುಗೆ ಪೂಜಾಕೈಂಕರ್ಯಗಳು, ನಿತ್ಯದಾಸೋಹ ಎಂದಿನಂತೆ ಜರುಗಲಿದೆ. ಶ್ರೀಮಠದ ಭಕ್ತಾದಿಗಳು ಎಂದಿನಂತೆ ಸಹಕರಿಸಬೇಕೆಂದು ಶ್ರೀಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ತಿಂಗಳ 5ನೇ ತಾರೀಖಿನಂದು ಮಠದಲ್ಲಿ ನಡೆಯುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಡೆಯಲಿದೆ. ನಾಳೆ ನಡೆಯಲಿರುವ ಸಾಮೂಹಿಕ ವಿವಾಹ ದಾಂಪತ್ಯ ಜೀವನಕ್ಕೆ ಕಾಲಿಡಲು 11 ಜೋಡಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಸ್ವಾಮೀಜಿಯ ಬಂಧನ ಹಿನ್ನೆಲೆಯಲ್ಲಿ ಸಾಮೂಹಿಕ ವಿವಾಹ ನೋಂದಣಿ ಕುಸಿದಿದೆ. ಆದರೂ ನಿಗದಿಯಂತೆಯೇ ಸೋಮವಾರ ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ಮುರುಘಾ ಮಠದ ಮುರುಘಾ ಶರಣರು ಅಪ್ರಾಪ್ತರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, 14 ದಿನ ನ್ಯಾಯಾಂಗ ಬಂಧನದಲ್ಲಿರುವಂತೆ ಕೋರ್ಟ್ ಆದೇಶ ನೀಡಿದೆ. ಇದರ ನಡುವೆ ಮುರುಘಾ ಮಠದಲ್ಲಿ ಸೆಪ್ಟೆಂಬರ್ 5 ರಂದು ಸಾಮೂಹಿಕ ವಿವಾಹ ನಡೆಯಲಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕದ ತಟ್ಟಿದ್ದರು.

ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿಗಳು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಆರೋಪಿಸಿ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.

ಅದಾದ ನಂತರ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ಬಳಿಕ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನವಾಗಿದೆ. ಪ್ರಕರಣದ 2 ನೇ ಆರೋಪಿಯನ್ನು ಕೂಡಾ ಅರೆಸ್ಟ್ ಮಾಡಲಾಗಿದೆ. ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶರಣರನ್ನು ನಗರದ ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ.

ಹಿಂದಿನ ಲೇಖನಇನ್‌ ಸ್ಟಾಗ್ರಾಂ ಪರಿಚಯ: ಬಾಲಕಿಯ ಮೇಲೆ ಬಾಲಕನಿಂದ ಲೈಂಗಿಕ ದೌರ್ಜನ್ಯ
ಮುಂದಿನ ಲೇಖನರಾಷ್ಟ್ರೀಯ ಸಿನಿಮಾ ದಿನ: ಸೆ.16 ರಂದು ಮಲ್ಟಿಫ್ಲೆಕ್ಸ್‌ ಗಳಲ್ಲಿ 75 ರೂ. ಗೆ ಟಿಕೆಟ್‌