ಬೆಂಗಳೂರು: ವಿವಾಹವಾಗಲು ನಿರಾಕರಿಸಿದ್ದಕ್ಕೆ ವಿಚ್ಛೇದಿತ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಂದಿದ್ದ ಮೆಕ್ಯಾನಿಕ್ ಒಬ್ಬನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ನದೀಂ ಪಾಷಾ (37) ಮತ್ತು ಸಂತ್ರಸ್ತೆ ಕೌಸರ್ ಮುಬೀನಾ ಎಂದು ಗುರುತಿಸಲಾಗಿದೆ.
ಮೊದಲು ಆಟೋ ಚಾಲಕನಾಗಿದ್ದ ನದೀಂ ನಂತರ ವಿದೇಶಕ್ಕೆ ಹೋಗಿದ್ದ. ಹಿಂದಿರುಗಿದ ನಂತರ, ಆತ ಮೆಕ್ಯಾನಿಕ್ ಆಗಿ ಕೆಲಸ ಮಾಡಲು ಪ್ರಾರಂಭಿಸಿದ್ದ.
2009 ರಲ್ಲಿ ಸಂತ್ರಸ್ತೆ ಮಂಡ್ಯದಲ್ಲಿ ವಸೀಂ ಪಾಷಾ ಎಂಬುವವರನ್ನು ವಿವಾಹವಾಗಿದ್ದರು ಮತ್ತು 11 ವರ್ಷಗಳ ನಂತರ ವಿಚ್ಛೇದನ ಪಡೆದಿದ್ದರು. ನಂತರ ಸಂತ್ರಸ್ತೆ ತನ್ನ ಮಗಳೊಂದಿಗೆ ಬೆಂಗಳೂರಿಗೆ ಬಂದು ನೆಲೆಸಿ, ಟ್ಯೂಷನ್ ತೆಗೆದುಕೊಳ್ಳುತ್ತಿದ್ದರು.
ಮಂಡ್ಯ ಮೂಲದ ನದೀಂ ಎಂಬಾತ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಆಕೆಯನ್ನು ಭೇಟಿಯಾಗಲು ಮಂಡ್ಯದಿಂದ ನಗರಕ್ಕೆ ಬರುತ್ತಿದ್ದ. ಸಂತ್ರಸ್ತೆ ಮತ್ತು ಆಕೆಯ ಸಂಬಂಧಿಕರು ಎರಡನೇ ಮದುವೆಯನ್ನು ಇಷ್ಟಪಡದ ಕಾರಣ, ಅವಳು ಆತನನ್ನು ಮದುವೆಯಾಗಲು ನಿರಾಕರಿಸಿದಳು. ಇದರಿಂದ ಹತಾಶೆಗೊಂಡ ಆತ ಸಂತ್ರಸ್ತೆಯನ್ನು ಕೊಂದಿದ್ದಾನೆ ಎನ್ನಲಾಗಿದೆ.
ಹತ್ಯೆಯಾಗುವ ಮೂರು ದಿನಗಳ ಮೊದಲು ಸಂತ್ರಸ್ತೆ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಳು. ಆರೋಪಿ ಆಕೆಗೆ ಬೆಳ್ಳಿಯ ಕಾಲುಂಗುರವನ್ನು ಉಡುಗೊರೆಯಾಗಿ ನೀಡಿದ್ದನು. ಚಿನ್ನದ ಸರ ನೀಡದ ಹಿನ್ನೆಲೆಯಲ್ಲಿ ಆಕೆ ಮನನೊಂದಿದ್ದಳು. ಇದೇ ವಿಚಾರವಾಗಿ ಜಗಳ ನಡೆದಿದ್ದು ಕೊಲೆಗೆ ಒಂದು ಕಾರಣ ಎನ್ನಲಾಗಿದೆ.
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.