ವೈದ್ಯಕೀಯ ಮಂಡಳಿಯು ವಿಶೇಷ ಚೇತನ ಅಭ್ಯರ್ಥಿಯ ಅಂಗವೈಕಲ್ಯ ಪ್ರಮಾಣವನ್ನು ನಿರ್ಧರಿಸಬೇಕಿದ್ದು, ವೈದ್ಯಕೀಯ ಪದವಿ ಪ್ರವೇಶಕ್ಕೆ ಅರ್ಹರಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ.
ಶೇ.50ರಷ್ಟು ಅಂಗವೈಕಲ್ಯ ಹೊಂದಿರುವ ನೀಟ್ ಅಭ್ಯರ್ಥಿಯಾದ ಚಿಕ್ಕಮಗಳೂರಿನ ಸಾದರಹಳ್ಳಿಯ ಡಾ. ಎಸ್ ಎನ್ ಪೂಜಾ ಅವರು ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶಕ್ಕೆ ಅರ್ಹರಾಗಿಲ್ಲ ಎಂಬುದಾಗಿ ನಿರ್ಧರಿಸಿ ಪ್ರಮಾಣ ಪತ್ರ ನೀಡಿದ್ದ ವೈದ್ಯಕೀಯ ಮಂಡಳಿಯ ಕ್ರಮವನ್ನು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠ ಅಸಿಂಧುಗೊಳಿಸಿದೆ.
“ವೈದ್ಯಕೀಯ ಮಂಡಳಿಯು ಕೇವಲ ಅಂಗವೈಕಲ್ಯ ಪ್ರಮಾಣ ಪರಿಶೀಲಿಸಿ ನಿರ್ಣಯಿಸಬಹದಷ್ಟೇ. ಅದನ್ನು ಹೊರತುಪಡಿಸಿ ಅಭ್ಯರ್ಥಿಯು ವೈದ್ಯಕೀಯ ಪದವಿ ಅಧ್ಯಯನ ಮಾಡಲು, ಪ್ರವೇಶ ಪಡೆಯಲು ಅರ್ಹತೆ ಹೊಂದಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಸಾಧ್ಯವಿಲ್ಲ. ಅದರಂತೆ ಪ್ರಕರಣದಲ್ಲಿ ವೈದ್ಯಕೀಯ ಮಂಡಳಿಯು ವಿದ್ಯಾರ್ಥಿನಿ ವೈದ್ಯಕೀಯ ಪದವಿ ಕೋರ್ಸ್ ಅಧ್ಯಯನ ಮಾಡಲು ಅರ್ಹರಾಗಿಲ್ಲ ಎಂದು ನಿರ್ಧಾರ ಮಾಡಿರುವುದು ಸಂಪೂರ್ಣವಾಗಿ ಅಸಮರ್ಥನೀಯ ಮತ್ತು ಅಕ್ರಮ” ಎಂದು ಪೀಠ ಹೇಳಿದೆ.
“ವೈದ್ಯಕೀಯ ಮಂಡಳಿಯು ಆಯ್ಕೆ ಪ್ರಾಧಿಕಾರವಲ್ಲ. ಹೀಗಾಗಿ, ಅಭ್ಯರ್ಥಿಯ ಪ್ರವೇಶಾತಿಯ ಅರ್ಹತೆಯ ಬಗ್ಗೆ ಪ್ರಮಾಣ ಪತ್ರ ನೀಡುವಂತಿಲ್ಲ. ಪ್ರವೇಶದ ಅರ್ಹತೆಯ ಬಗ್ಗೆ ಸಕ್ಷಮ ಪ್ರಾಧಿಕಾರ ಅಂದರೆ ಆಯ್ಕೆ ಪ್ರಾಧಿಕಾರ ನಿರ್ಧರಿಸುವ ಅಗತ್ಯವಿದೆ. ವೈದ್ಯಕೀಯ ಮಂಡಳಿಯ ತನ್ನ ವ್ಯಾಪ್ತಿ ಮೀರಿ ನಡೆದುಕೊಂಡಿದೆ. ಈ ರೀತಿ ನಡೆದುಕೊಳ್ಳಲು ಅವಕಾಶ ಇಲ್ಲ. ಅಂಗವೈಕಲ್ಯದ ಪ್ರಮಾಣ ಆಧರಿಸಿ ಅಂಗವಿಕಲರು ಕಾನೂನು ಪ್ರಕಾರ ಪಡೆಯಬೇಕಾದ ಸೌಲಭ್ಯ ಪಡೆದುಕೊಳ್ಳಲು ಅರ್ಹರಿರುತ್ತಾರೆ” ಎಂದು ಪೀಠ ಕಟುವಾಗಿ ನುಡಿದಿದೆ.
“ಅಂತಿಮವಾಗಿ ಅರ್ಜಿದಾರು ಶೇ.೫೦ರಷ್ಟು ಅಂಗವೈಕಲ್ಯ ಹೊಂದಿರುವುದರಿಂದ ಸಹಜ ಮತ್ತು ಕಾನೂನುಬದ್ಧವಾಗಿ ವೈದ್ಯಕೀಯ ಪದವಿ ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಲ್ಪಡಲು ಅರ್ಹರಿದ್ದಾರೆ. ಅದರಂತೆ ಪೂಜಾ ಅವರು ವೈದ್ಯಕೀಯ ಕೋರ್ಸ್ ಗೆ ಅಂಗವಿಕಲ ಕೋಟಾದಡಿ ಪ್ರವೇಶ ಪಡೆಯುವ ಅರ್ಹತೆ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಮತ್ತು ನವದೆಹಲಿಯ ವೈದ್ಯಕೀಯ ಪರಿಷತ್ತು ಸಮಿತಿ ಪರಿಶೀಲಿಸಬೇಕು ಹಾಗೂ ಪರಿಗಣಿಸಬೇಕು. ಆ ವೇಳೆ ಅಂಗವಿಕಲತೆ ಪ್ರಮಾಣದ ಮೇಲೆ ಅರ್ಜಿದಾರರು ವೈದ್ಯಕೀಯ ಕೋರ್ಸ್ ಅಧ್ಯಯನ ಮಾಡಲು ಅರ್ಹರಾಗಿಲ್ಲ ಎಂಬ ವೈದ್ಯಕೀಯ ಮಂಡಳಿ ನಿರ್ಧಾರವನ್ನು ಪರಿಗಣಿಸಬಾರದು. ಅಂಗವಿಕಲ ಕೋಟಾದಡಿ ಪ್ರವೇಶ ಪಡೆಯಲು ಅರ್ಜಿದಾರರು ಅರ್ಹರಾಗಿದ್ದರೆ, ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಬೇಕು” ಎಂದು ಹೈಕೋರ್ಟ್ ನಿರ್ದೇಶಿಸಿದೆ.
ಪ್ರಕರಣದ ಹಿನ್ನೆಲೆ: ಅಂಗವಿಕಲರಾದ ಪೂಜಾ ಅವರು ನೀಟ್ ಮೂಲಕ ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶಕ್ಕೆ ಅಂಗವಿಕಲ ಕೋಟಾದಡಿ ಅರ್ಜಿ ಸಲ್ಲಿಸಿದ್ದರು. ವೈದ್ಯಕೀಯ ಪರಿಷತ್ತು ಸಮಿತಿ (ಎನ್ ಎಂಸಿ) ಸೂಚನೆ ಮೇರೆಗೆ ಚೆನ್ನೈನ ಮದ್ರಾಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷೆ ನಡೆಸಿದ್ದ ವೈದ್ಯಕೀಯ ಮಂಡಳಿ ಅಭ್ಯರ್ಥಿಯು ಶೇ. 50ರಷ್ಟು ಅಂಗವೈಕಲ್ಯ ಹೊಂದಿದ್ದು, ಎನ್ ಎಂಸಿ ನಿಯಮಗಳ ಪ್ರಕಾರ ವೈದ್ಯಕೀಯ ಕೋರ್ಸ್ ಅಧ್ಯಯನ ಮಾಡಲು ಅರ್ಹರಾಗಿಲ್ಲ ಎಂದು ನಿರ್ಧರಿಸಿ ಪ್ರಮಾಣ ಪತ್ರ ನೀಡಿತ್ತು. ಅದನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪೂಜಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.