ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೇಲುಕೋಟೆ(Melukote): ಇಲ್ಲಿನ ಯೋಗಾನರಸಿಂಹ ಸ್ವಾಮಿ ಬೆಟ್ಟ ಹತ್ತುವ ವೇಳೆ ಭಾನುವಾರ ಒಣಗಿದ ಮರವೊಂದರ ಕೊಂಬೆ ಮರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ ಗಂಭೀರವಾಗಿ ಗಾಯಗೊಂಡಿದ್ದಾರೆ.
110 ವಿದ್ಯಾರ್ಥಿಗಳು ಶ್ರೀಕ್ಷೇತ್ರಕ್ಕೆ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ಚೆಲುವರಾಯಸ್ವಾಮಿ ದೇವಾಲಯದಲ್ಲಿ ದೇವರ ದರ್ಶನ ಪಡೆದು ಬೆಳಿಗ್ಗೆ 11 ಗಂಟೆಯ ವೇಳೆ ಯೋಗಾನರಸಿಂಹಸ್ವಾಮಿ ಬೆಟ್ಟ ಏರುತ್ತಿದ್ದರು. ಮೆಟ್ಟಿಲು ಪಕ್ಕದಲ್ಲೇ ಒಣಗಿದ್ದ ಅರಳಿ ಮರದ ಕೊಂಬೆ ಏಕಾಏಕಿ ವಿದ್ಯಾರ್ಥಿಗಳ ಮೇಲೆ ಮುರಿದು ಬಿದ್ದಿದೆ.
ಘಟನೆಯಲ್ಲಿ ನಂಜನಗೂಡು ಪಟ್ಟಣದ ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ನಿಶಾಂತ್, ವರುಣ್, ಯೋಗೇಶ್ ಹಾಗೂ ಶಿಕ್ಷಕ ಕೇಶವರಾವ್ ಗಂಭೀರ ಗಾಯಗೊಂಡಿದ್ದಾರೆ.
ಒಬ್ಬ ವಿದ್ಯಾರ್ಥಿ ಕಾಲು ಮುರಿದಿದ್ದು ಮತ್ತಿಬ್ಬರಿಗೆ ತಲೆ ಹಾಗೂ ಕಣ್ಣಿನ ಭಾಗಕ್ಕೆ ಗಾಯಗಳಾಗಿವೆ. ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಎಸ್ ಆಸ್ವತ್ರೆಗೆ ದಾಖಲಿಸಲಾಯಿತು.
ಮೇಲುಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ, ಸಿಬ್ಬಂದಿಯಿಲ್ಲದೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಪರದಾಡಬೇಕಾಯಿತು.
ಘಟನೆ ನಡೆದು 1 ಗಂಟೆಯ ಬಳಿಕ ಪಾಂಡವಪುರದಿಂದ ಬಂದ ಆಂಬುಲೆನ್ಸ್ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿತು.
ಸ್ಥಳೀಯ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೇವೆ ದೊರೆಯದೇ ಇರುವುದಕ್ಕೆ ಸ್ಥಳೀಯರು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ಪ್ರಕರಣ ದಾಖಲಾಗಿಲ್ಲ.