ಮನೆ ಅಪರಾಧ ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

0

ಪುಂಜಾಲಕಟ್ಟೆ: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್‌ (57) ಅವರ ಮೃತದೇಹ ಜು.5 ಶುಕ್ರವಾರ ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

Join Our Whatsapp Group

ಮೈಕಲ್ ಗುರುವಾರ ಸಂಜೆ ಅಜಿಲಮೊಗರು ಕೂಟೇಲು ಸೇತುವೆ ಬಳಿ ಕಿಂಡಿ ಅಣೆಕಟ್ಟಿನಲ್ಲಿ ಕುಳಿತು ಮೀನು ಹಿಡಿಯುತ್ತಿದ್ದ ವೇಳೆ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದರು.

‌ಸುದ್ದಿ ತಿಳಿಯುತ್ತಿದ್ದಂತೆ  ರಾತ್ರಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ  ನದಿಯಲ್ಲಿ ಹುಡುಕುವ ಪ್ರಯತ್ನ ನಡೆಸಿದರಾದರೂ ಸುಳಿವು‌ ಸಿಕ್ಕಿರಲಿಲ್ಲ. ಬೆಳಿಗ್ಗೆ ನೇತ್ರಾವತಿ ನದಿಯಲ್ಲಿ ನೀರು ಇಳಿಕೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ ಐ ಹರೀಶ್ ಮತ್ತು ಸಿಬಂದಿಗಳು‌ ಸ್ಥಳಕ್ಕೆ ತೆರಳಿ‌ ಪರಿಶೀಲನೆ‌ ನಡೆಸಿದ್ದಾರೆ. ಮೈಕಲ್ ಅವರ ಮನೆ ಮಂದಿ ಸ್ಥಳಕ್ಕೆ ಆಗಮಿಸಿದ್ದರು.

ಹಿಂದಿನ ಲೇಖನನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ: ಚಾಲಕ ಸಾವು, ಪ್ರಯಾಣಿಕರಿಗೆ ಗಾಯ
ಮುಂದಿನ ಲೇಖನಕುಷ್ಟಗಿ: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ