ಮನೆ ರಾಜ್ಯ ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್: ಸಿಎಂ ಸಿದ್ದರಾಮಯ್ಯ

ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಕೆಎಂಎಫ್  50 ಎಂಲ್​ ಹಾಲಿನ ಪ್ಯಾಕೆಟ್​ಗೆ 2 ರೂಪಾಯಿ ದರ ಏರಿಸಲಾಗಿದೆ. ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.

Join Our Whatsapp Group

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ‌ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ‌ ಮಾಡ್ತಾರೆ. ನನಗೆ ಗೊ‌ತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಇಲ್ಲಿ ಕಡಿಮೆ ಇದೆ ಎಂದು ತಿಳಿಸಿದರು.

ಸದ್ಯ ಕೆಎಂಎಫ್‌ನ 1 ಲೀಟರ್‌ ಹಾಲಿಗೆ ಪ್ರಸ್ತುತ ದರ $42. ಆದರೆ, 1 ಲೀಟಲ್‌ ಹಾಲಿಗೆ ಹೆಚ್ಚುವರಿಯಾಗಿ 50 ಎಂಎಲ್‌ ಸೇರ್ಪಡೆ ಮಾಡಲಾಗ್ತಿದೆ. ಆ 50 ಎಂಎಲ್‌ ಹಾಲಿನ 2 ರೂಪಾಯಿ 10 ಪೈಸೆಯಾಗುತ್ತೆ. ಅದಕ್ಕಾಗಿ 1050 ಎಂಎಲ್‌ನ ಈ ಪ್ಯಾಕೆಟ್ ಹಾಲಿನ ದರ ನಾಳೆಯಿಂದ 44 ರೂಪಾಯಿ ಆಗಿರಲಿದೆ. ನಿಜಕ್ಕೂ 44 ರೂಪಾಯಿ 10 ಪೈಸೆ ದರ ಏರಿಕೆಯಾಗಬೇಕು. 10 ಪೈಸೆ ಕಡಿಮೆ ಮಾಡಲಾಗ್ತಿದೆ. ಜತೆಗೆ ಏಜೆಂಟ್‌ರಿಗೆ 10 ಪೈಸೆ ಹೆಚ್ಚಿನ ಬೆಲೆಯನ್ನೇ ಸರ್ಕಾರವೇ ಭರಿಸಲಿದೆಯಂತೆ. ಲೀಟರ್‌ಗೆ 20 ಪೈಸೆಯಷ್ಟು ಸರ್ಕಾರಕ್ಕೇ ನಷ್ಟವಾಗುತ್ತಂತೆ. ಜತೆಗೆ ಅರ್ಧ ಲೀಟರ್‌ ಹಾಲಿಗೂ 50 ಎಂಎಲ್‌ ಹೆಚ್ಚಿಸಿದ್ರೆ ಹೆಚ್ಚುವರಿ 2 ರೂಪಾಯಿ ರೇಟ್ ನಾಳೆಯಿಂದ ಜಾರಿಗೆ ಬರಲಿದೆ.

ಇನ್ನು ಇದೇ ವೇಳೆ ಡಿಸೆಂಬರ್‌ 20ರಿಂದ 3 ದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಬಳಿಕ ಸಿಎಂ ಮಾಹಿತಿ ನೀಡಿದ್ದಾರೆ. ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.20, 21 ಮತ್ತು 22ರಂದು ನಡೆಯಲಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಎಲ್ಲ‌ ರೀತಿ ಸಹಕಾರ ನೀಡುತ್ತೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಹೆಸರು ಶೀಘ್ರವೇ ಪ್ರಕಟಿಸುತ್ತೇವೆ. ಜಿಲ್ಲಾಡಳಿತ, ಸಾಹಿತ್ಯ ಪರಿಷತ್‌ನವರು ಕೆಲ ಹೆಸರುಗಳನ್ನು ನೀಡಿದ್ದಾರೆ. ಚರ್ಚೆ ಮಾಡಿ ಹೆಸರು ಅಂತಿಮಗೊಳಿಸಲಾಗುವುದು. ಎಲ್ಲರೂ ಸೇರಿ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಹಿಂದಿನ ಲೇಖನಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ:  ಸಿ.ಎಂ ಸಿದ್ದರಾಮಯ್ಯ
ಮುಂದಿನ ಲೇಖನವ್ಯಕ್ತಿತ್ವದ ಸಾಧನಗಳು