ಮನೆ ರಾಜ್ಯ ಮತಯಾಚನೆ ವೇಳೆ ಸಚಿವ ಕೆ.ಗೋಪಾಲಯ್ಯನವರಿಗೆ ಉತ್ತಮ ಜನಸ್ಪಂದನೆ

ಮತಯಾಚನೆ ವೇಳೆ ಸಚಿವ ಕೆ.ಗೋಪಾಲಯ್ಯನವರಿಗೆ ಉತ್ತಮ ಜನಸ್ಪಂದನೆ

0
ಮತಯಾಚನೆ ವೇಳೆ ಸಚಿವ ಕೆ.ಗೋಪಾಲಯ್ಯನವರಿಗೆ ಉತ್ತಮ ಜನಸ್ಪಂದನೆ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕುರುಬರಹಳ್ಳಿಯ ಜೆ.ಸಿ ನಗರದ ಮುಖ್ಯ ರಸ್ತೆಯಲ್ಲಿ ಮಾನ್ಯ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

Join Our Whatsapp Group

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಜನಸಾಮಾನ್ಯರ ಆರೋಗ್ಯದ ಕಾಳಜಿಯಿಂದ ಉತ್ತಮ ಆಸ್ಪತ್ರೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ನವ ನಂದಿನಿ ಉದ್ಯಾನವನ ನಿರ್ಮಾಣ ಹಾಗೂ ಕೋವಿಡ್ ಅವಧಿಯಲ್ಲಿ  350 ಕ್ಕೂ ಹೆಚ್ಚಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿ ಕ್ಷೇತ್ರದ ಜನತೆಯ ಉಳಿವಿಗಾಗಿ ಶ್ರಮವಹಿಸಿ ಕಾರ್ಯನಿರ್ವಹಣೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮುಂದೆ ಇಟ್ಟು ಮಾನ್ಯ ಸಚಿವರು ಮತಯಾಚನೆಯನ್ನು ಮಾಡಿದರು.
ಜನಸಾಮಾನ್ಯರ ಆರೋಗ್ಯ ಉತ್ತಮ ರೀತಿಯಲ್ಲಿ ಇರಬೇಕು ಎಂಬ ಹಿತದೃಷ್ಟಿಯಿಂದ ಮಾನ್ಯ ಸಚಿವರು ಕ್ಷೇತ್ರದದಲ್ಲಿ 'ನಮ್ಮ ಕ್ಲಿನಿಕ್' ಅನ್ನು ಪ್ರಾರಂಭಿಸಿ ಕಾರ್ಯರೂಪಕ್ಕೆ ತಂದಿದ್ದಾರೆ. ನಮ್ಮ ಕ್ಲಿನಿಕ್ ನಲ್ಲಿ ಉಚಿತವಾಗಿ ಥೈರಾಯಿಡ್, ಬಿಪಿ, ಶುಗರ್ ಪರೀಕ್ಷೆಯನ್ನು 
ಮಾಡಿಸಿಕೊಂಡು ಉಚಿತವಾಗಿ ಮಾತ್ರೆಗಳನ್ನು ನೀಡುವಂತಹ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆಯಲ್ಲಿ ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಮತಯಾಚನೆಗೆ ತೆರಳಿದ ಸಂದರ್ಭದಲ್ಲಿ ಸ್ಥಳೀಯರು ಸಚಿವರು ಮುಂದೆ ಅನೇಕ ಕುಂದುಕೊರತೆಗಳನ್ನು ತಿಳಿಸಿದರು. ಅವರೆಲ್ಲರ ಅಹವಾಲುಗಳನ್ನು ಸ್ವೀಕರಿಸಿ ಶೀಘ್ರದಲ್ಲಿ ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಚುನಾವಣೆ ಪ್ರಚಾರದ ವೇಳೆಯಲ್ಲಿ ಯುವ ಮುಖಂಡರು ಹಾಗೂ ಹಿರಿಯ ಮುಖಂಡರುಗಳು ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ಅವರಿಗೆ ಮಾನ್ಯ ಸಚಿವರು ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬಿಜೆಪಿ ಉತ್ತರ ಘಟಕದ ಜಿಲ್ಲಾ ಅಧ್ಯಕ್ಷ ಜಯರಾಮ್, ಜಯಸಿಂಹ, ಅವಿನ್ ಆರಾಧ್ಯ, ಕಲ್ಲೇಶಪ್ಪ, ಸುಬ್ಬಣ್ಣ, ಚಾಲುಕ್ಯ ರಮೇಶ್, ವಾರ್ಡ್ ಅಧ್ಯಕ್ಷ ಮಂಜುನಾಥ್, ಮಹಿಳಾ ಮುಖಂಡರು, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದಿನ ಲೇಖನಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಕಾರು: ಐವರಿಗೆ ಗಾಯ
ಮುಂದಿನ ಲೇಖನಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ಮೊದಲ ಬಾರಿಗೆ ವಯನಾಡ್‌’ಗೆ ರಾಹುಲ್ ಗಾಂಧಿ ಭೇಟಿ: ರೋಡ್ ಶೋ