ಮನೆ ರಾಜಕೀಯ ಮೈಸೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಸಚಿವ ಆರ್.ಅಶೋಕ್

ಮೈಸೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಸಚಿವ ಆರ್.ಅಶೋಕ್

0

ಮೈಸೂರು(Mysuru): ನಗರದ ವಾರ್ಡ್ ನಂ 46 ರಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಕಂದಾಯ ಸಚಿವ ಆರ್ ಅಶೋಕ್ ಚಾಲನೆ ನೀಡಿದರು.

ಬಳಿಕ ವಾರ್ಡ್’ನ ಮನೆ ಮನೆಗಳಿಗೆ ತೆರಳಿ‌ ಬಿಜೆಪಿಯ ಸರ್ಕಾರದ ಸಾಧನೆಯ ಭಿತ್ತಿಪತ್ರ ಹಂಚಿಕೆ ಮಾಡಿದರು. ಮನೆ ಮನೆಗಳಿಗೆ ಬಿಜೆಪಿಯೇ ಭರವೆಸೆ ಎಂಬ ಭಿತ್ತಿಪತ್ರ ಅಂಟಿಸಿದರು.

ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಇಂದು ಮನೆ ಮನೆಗೆ ತೆರಳಿ ಬಿಜೆಪಿ ಸರ್ಕಾರದ ಸಾಧನೆ ತಿಳಿಸಲಾಗುತ್ತಿದೆ.. ನರೇಂದ್ರ ಮೋದಿಯವರ ಸಾಧನೆ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ ಎಂದರು.

ಮಂಡ್ಯದಲ್ಲಿ ಗೊ ಬ್ಯಾಕ್ ಅಶೋಕ್ ಪೋಸ್ಟರ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್.ಅಶೋಕ್, ಅದೆಲ್ಲ ಯಾರೋ  ಚಿಲ್ಲರೆಗಳ ಕೆಲಸ. ಅದಕ್ಕೆ ಮಾನ್ಯತೆ ನೀಡುವ ಅಗತ್ಯ ಇಲ್ಲ ಎಂದು ಜಾರಿಕೊಂಡರು.

ಹಿಂದಿನ ಲೇಖನನೆಲಗಡಲೆ ಸಾಕಷ್ಟು ಆರೋಗ್ಯಕಾರಿ ಪ್ರಯೋಜನ ಹೊಂದಿದೆ
ಮುಂದಿನ ಲೇಖನಡಾಲಿ ಧನಂಜಯ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಜೀಬ್ರಾ’