ಮನೆ ಸುದ್ದಿ ಜಾಲ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಎಲ್.ನಾಗೇಂದ್ರ

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಎಲ್.ನಾಗೇಂದ್ರ

0

ಮೈಸೂರು (Mysuru): ಇಂದು ನಗರದ ಕುಕ್ಕರಹಳ್ಳಿ ಮಾರಮ್ಮ ದೇವಸ್ಥಾನದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಎಲ್‌.ನಾಗೇಂದ್ರ ಉದ್ಘಾಟಿಸಿದರು.

ಮೈಸೂರು ಮಹಾನಗರಪಾಲಿಕೆಯ ವಾರ್ಡ್‌ ನಂ 21 ರ ವ್ಯಾಪ್ತಿಯಲ್ಲಿನ ಕುಕ್ಕರಹಳ್ಳಿ ಮಾರಮ್ಮ ದೇವಸ್ಥಾನದ ಬಳಿ ನಗರಪಾಲಿಕೆಯ ಅನುದಾನ 10 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. ಇದರಿಂದ ವಾರ್ಡಿನ ಸಾಕಷ್ಟು ಜನರಿಗೆ ಉಪಯುಕ್ತವಾಗಲಿದೆ.

ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯರಾದ ಶ್ರೀಮತಿ ವೇದಾವತಿ ಇತರರು ಉಪಸ್ಥಿತರಿದ್ದರು.

ಹಿಂದಿನ ಲೇಖನಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ: ಮುಖ್ಯಮಂತ್ರಿ ಬೊಮ್ಮಾಯಿ
ಮುಂದಿನ ಲೇಖನನಾಳೆ ಮೊದಲ ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ