ಮೈಸೂರು: ನೀರು ಬಹಳ ಅತ್ಯಮೂಲ್ಯವಾದ ವಸ್ತು, ಸಕಲ ಜೀವಿರಾಶಿಗಳಿಗೂ ಅವಶ್ಯಕವಾದದ್ದು, ಹಾಗಾಗಿ ನೀರಿನ ಮಿತ ಬಳಕೆ, ನೀರಿನ ಸದ್ಬಳಕೆ ಮಾಡುವುದು ಬಹಳ ಮುಖ್ಯ ಎಂದು ಉಪ ಕೃಷಿ ನಿರ್ದೇಶಕರಾದ ಡಾ. ಧನಂಜಯ ಬಿ.ಎನ್. ಅವರು ರೈತರಿಗೆ ಕರೆನೀಡಿದರು.
ನಾಗನಹಳ್ಳಿಯ ಕೃಷಿ ತರಬೇತಿ ಕೇಂದ್ರದಲ್ಲಿ ನಡೆದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ “ತೆಂಗು ಮತ್ತು ಅಡಿಕೆ ಬೆಳೆಗಳಲ್ಲಿ ತಳಿ ಆಯ್ಕೆ, ಆಧುನಿಕ ಕೃಷಿ ಪದ್ದತಿಗಳು, ಸೂಕ್ಷ್ಮನೀರಾವರಿ ಮತ್ತು ರಸಾವರಿ ತಾಂತ್ರಿಕತೆಗಳ ಅಳವಡಿಕೆ ಮೂಲಕ ಅಧಿಕ ಲಾಭ” ವಿಷಯ ಕುರಿತ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫಲವತ್ತಾದ ಮಣ್ಣು ಮತ್ತು ನೀರನ್ನು ನಮ್ಮ ಮುಂದಿನ ಪೀಳಿಗೆಗೆ ಬಿಟ್ಟುಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ವಾಡಿಕೆಗಿಂತ ಕಡಿಮೆ ಮಳೆ ಬಿದ್ದರೂ ಸಹ ಮಳೆ ನೀರಿನ ಸದ್ಬಳಕೆಯನ್ನು ಹನಿ/ತುಂತುರು ನೀರಾವರಿ ಮುಖಾಂತರ ಮಾಡಬಹುದಾಗಿದೆ ಎಂದು ಸಲಹೆ ನೀಡಿದರು.
ಇದು ಮೂರು ದಿನಗಳ ತರಬೇತಿ ಕಾರ್ಯಕ್ರಮವಾಗಿದ್ದು, ತೆಂಗು, ಅಡಿಕೆ ಮತ್ತು ಇನ್ನಿತರ ತೋಟಗಾರಿಕೆ ಬೆಳೆಗಳ ವೈಜ್ಞಾನಿಕ ಬೇಸಾಯ, ರೋಗ ಮತ್ತು ಕೀಟಗಳ ನಿಯಂತ್ರಣ, ಸೂಕ್ಷ ನೀರಾವರಿ ಮತ್ತು ರಸಾವರಿ ಪದ್ದತಿಗಳ ಅಳವಡಿಕೆ ಬಗ್ಗೆ ತಿಳಿಸಿಕೊಡಲಾಗುವುದು ಎಂದರು.
ಜೈನ್ ಇರಿಗೇಷನ್ ಸಿಸ್ಟಮ್ನ ತಾಂತ್ರಿಕ ಸಲಹೆಗಾರರಾದ ನಿರಂಜನ್ ರವರು ಮಾತನಾಡಿ ತೆಂಗು, ಅಡಿಕೆ ಮತ್ತು ಇತರೆ ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿ ಪದ್ಧತಿಗಳ ಅಳವಡಿಕೆ, ನಿರ್ವಹಣೆ, ಹನಿ ನೀರಾವರಿ ಹಾಗೂ ರಸಾವರಿ ಪದ್ದತಿಗಳ ಅಳವಡಿಕೆ ಬಗ್ಗೆ ತಿಳಿಸಿಕೊಟ್ಟರು.
ತರಬೇತಿಯಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳ 30 ಜನ ರೈತರು ಭಾಗವಹಿಸಿದ್ದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.