ಚಿಕ್ಕಬಳ್ಳಾಪುರ: ಕುಮಾರಸ್ವಾಮಿರನ್ನು ಕೇಂದ್ರದಲ್ಲಿ ಮಂತ್ರಿ ಮಾಡಬೇಕೆಂಬ ಪುತ್ರ ವ್ಯಾಮೋಹದಿಂದ ದೇವೇಗೌಡರು ಮೋದಿ ಜಪ ಮಾಡುತ್ತಿದ್ದಾರೆಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಟೀಕಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ದೇವೇಗೌಡರು ಈ ಹಿಂದೆ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಹೇಳಿದ್ದರು. ಇದೀಗ ಮೋದಿಯೆ ಮತ್ತೆ ದೇಶದ ಪ್ರಧಾನಿ ಮಂತ್ರಿ ಆಗುತ್ತಾರೆಂದು ಹೇಳುತ್ತಿದ್ದಾರೆ. ಕೇಂದ್ರದಲ್ಲಿ ಕುಮಾರಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂಬ ವ್ಯಾಮೋಹ ದೇವೇಗೌಡರದು ಎಂದರು.
2024 ರಲ್ಲಿ ಮೋದಿ ಮಾಜಿ ಆಗಲಿದ್ದಾರೆ. ಜನ ಮೋದಿ ವಿರುದ್ಧ ರೋಸಿ ಹೋಗಿದ್ದಾರೆ. ಬೆಲೆ ಏರಿಕೆ, ಭ್ರಷ್ಟಾಚಾರ, ಆನ್ಯಾಯದಿಂದ ಜನ ಮೋದಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು. ಹತಾಶೆಯಿಂದ ರಾಹುಲ್ ಗಾಂಧಿ ನ್ಯಾಯ ಯಾತ್ರೆಯನ್ನು ತಡೆಯುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ 11 ದಿನ ಕಠಿಣ ವ್ರತಾಚರಣೆ ಬಗ್ಗೆ ಮೋಯ್ಲಿ ಇದೇ ವೇಳೆ ಅನುಮಾನ ವ್ಯಕ್ತಪಡಿಸಿದರು. 11 ದಿನ ಉಪವಾಸ ಮಾಡುವುದು ಕಷ್ಟ. ವ್ರತ ಆಚರಣೆ ಮಾಡಿದ್ದರೆ ಮೋದಿ ಬದುಕುಳಿದಿರುವುದೇ ಪವಾಡ ಎಂದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.