ಶೃಂಗೇರಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು? ಎಂದು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಶೃಂಗೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯದ ಜನರು ಭೂಮಿ ನೀಡಿದ್ದಾರೆ. ಕೆಲವರಿಗೆ ಇನ್ನೂ ಹಣ ಬಂದಿಲ್ಲ. ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ಟೀಕಿಸಿದ್ದಾರೆ.
ಮಾರ್ಚ್ 11ರಂದು ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮೋದಿ ಬರುತ್ತಾರೆ. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಅವರು ಬರುತ್ತಿದ್ದಾರೆ ಎಂದು ಕಿಡಿಕಾರಿದರು.
ಶುಕ್ರವಾರ ರಾತ್ರಿಯೇ ಶೃಂಗೇರಿಗೆ ತೆರಳಿದ್ದ ಎಚ್ಡಿಕೆ ಶನಿವಾರ ಬೆಳಿಗ್ಗೆ ಶೃಂಗೇರಿ ಮಠದ ಭಾರತೀತೀರ್ಥ ಶ್ರೀಗಳನ್ನು ಏಕಾಂತದಲ್ಲಿ ಭೇಟಿಯಾದರು. ನಂತರ ಪತ್ರಿಕಾಗೋಷ್ಠಿ ನಡೆಸಿದರು.
ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆ ರಾಜ್ಯದ ಜನರಿಗೂ ಕುತೂಹಲವಿದೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರೆಲ್ಲರೂ ನನ್ನ ಕುಟುಂಬ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿ ಸೋಲಿಸ್ತೇನೆ ಎಂದಿದ್ದೆ. ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕಾರ್ಯಕರ್ತರ ಅಭಿಮಾನಕ್ಕೆ ಚ್ಯುತಿ ಬರದಂತೆ ಟಿಕೆಟ್ ನೀಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಕಾಂಗ್ರೆಸ್’ನವರು ಬಿಜೆಪಿಯ ಬಿ ಟೀಂ ಜೆಡಿಎಸ್ ಎಂದು ಹೇಳುತ್ತಾರೆ. ಬಿಜೆಪಿಯವರು ಕಾಂಗ್ರೆಸ್ನ ಬಿ ಟೀಂ ಎಂದು ಹೇಳುತ್ತಾರೆ. ಆದರೆ ನಾವು ಯಾರ ಬಿ ಟೀಂ ಕೂಡ ಅಲ್ಲ, ಈ ರಾಜ್ಯದ ಜನರ ಟೀಂ ಎಂದು ಕುಮಾರಸ್ವಾಮಿ ಹೇಳಿದರು.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.