ಮನೆ ರಾಜಕೀಯ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ: ಎಚ್​.ಡಿ ಕುಮಾರಸ್ವಾಮಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ: ಎಚ್​.ಡಿ ಕುಮಾರಸ್ವಾಮಿ

0

ಶೃಂಗೇರಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು? ಎಂದು ಜೆಡಿಎಸ್ ನಾಯಕ ಎಚ್​.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಶೃಂಗೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯದ ಜನರು ಭೂಮಿ ನೀಡಿದ್ದಾರೆ. ಕೆಲವರಿಗೆ ಇನ್ನೂ ಹಣ ಬಂದಿಲ್ಲ. ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ಟೀಕಿಸಿದ್ದಾರೆ.

ಮಾರ್ಚ್​​ 11ರಂದು ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮೋದಿ ಬರುತ್ತಾರೆ. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಅವರು ಬರುತ್ತಿದ್ದಾರೆ ಎಂದು ಕಿಡಿಕಾರಿದರು.

ಶುಕ್ರವಾರ ರಾತ್ರಿಯೇ ಶೃಂಗೇರಿಗೆ ತೆರಳಿದ್ದ ಎಚ್​ಡಿಕೆ ಶನಿವಾರ ಬೆಳಿಗ್ಗೆ ಶೃಂಗೇರಿ ಮಠದ ಭಾರತೀತೀರ್ಥ ಶ್ರೀಗಳನ್ನು ಏಕಾಂತದಲ್ಲಿ ಭೇಟಿಯಾದರು. ನಂತರ ಪತ್ರಿಕಾಗೋಷ್ಠಿ ನಡೆಸಿದರು.

ಹಾಸನ ಕ್ಷೇತ್ರದ ಟಿಕೆಟ್​ ಬಗ್ಗೆ ರಾಜ್ಯದ ಜನರಿಗೂ ಕುತೂಹಲವಿದೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರೆಲ್ಲರೂ ನನ್ನ ಕುಟುಂಬ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿ ಸೋಲಿಸ್ತೇನೆ ಎಂದಿದ್ದೆ. ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕಾರ್ಯಕರ್ತರ ಅಭಿಮಾನಕ್ಕೆ ಚ್ಯುತಿ ಬರದಂತೆ ಟಿಕೆಟ್​ ನೀಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್​ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್​​’ನವರು ಬಿಜೆಪಿಯ ಬಿ ಟೀಂ ಜೆಡಿಎಸ್​ ಎಂದು ಹೇಳುತ್ತಾರೆ. ಬಿಜೆಪಿಯವರು ಕಾಂಗ್ರೆಸ್​ನ ಬಿ ಟೀಂ ಎಂದು ಹೇಳುತ್ತಾರೆ. ಆದರೆ ನಾವು ಯಾರ ಬಿ ಟೀಂ ಕೂಡ ಅಲ್ಲ, ಈ ರಾಜ್ಯದ ಜನರ ಟೀಂ ಎಂದು ಕುಮಾರಸ್ವಾಮಿ ಹೇಳಿದರು.

ಹಿಂದಿನ ಲೇಖನಅಗ್ನಿಪಥ್ ಯೋಜನೆ ಕುರಿತು ಸೋಮವಾರ ತೀರ್ಪು ಪ್ರಕಟಿಸಲಿರುವ ದೆಹಲಿ ಹೈಕೋರ್ಟ್
ಮುಂದಿನ ಲೇಖನಕೆಂಪಣ್ಣ ಆಯೋಗ ವರದಿ: ಸಿದ್ದರಾಮಯ್ಯ ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ: ಸಿಎಂ ಬೊಮ್ಮಾಯಿ