ಮಧ್ಯ ಕೂಟನಡೆಸಿ ಕೃತಜ್ಞತೆ ಸಲ್ಲಿಸಿದ ಬಿಜೆಪಿ ಸಂಸದ ಕೆ ಸುಧಾಕರ್!
ಜೋಗದ ಗುಂಡಿಯಲ್ಲಿ ಧುಮ್ಮಕ್ಕುತ್ತಿದೆ ಜಲಧಾರೆ
ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಾಣಿಗಳಲ್ಲಿರುವ ಪ್ರೀತಿ ಮತ್ತು ಒಗ್ಗಟ್ಟುನು ಒಮ್ಮೆ ನೋಡಿ
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿದ್ದ ಶಿವಸೇನಾ ಸಂಸದ ಸಂಜಯ್ ರಾವುತ್ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
₹1,034 ಕೋಟಿಯ ಪತ್ರಾ ಚಾಲ್ ಭೂಮಿ ಅಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ರಾವುತ್ ಅವರನ್ನು ಜಾರಿ ನಿರ್ದೆಶನಾಲಯ ಬಂಧಿಸಿತ್ತು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ರಾವುತ್ ಅರ್ಜಿಯ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ, ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು.
ರಾವುತ್ ಅವರಿಗೆ ಜಾಮೀನು ಸಿಕ್ಕಿರುವುದನ್ನು ಸ್ವಾಗತಿಸುತ್ತೇನೆ. ಅವರು, ಅತ್ಯಂತ ಧೈರ್ಯ ಮತ್ತು ಹೋರಾಟದ ಮನೋಭಾವವನ್ನು ಪ್ರದರ್ಶಿಸಿದ್ಧಾರೆ ಎಂದು ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ.
ಮುಂಬೈನ ಆರ್ಥರ್ ಜೈಲ್’ನಲ್ಲಿರುವ ಸಂಜಯ್ ರಾವುತ್, ಜಾಮೀನು ಪ್ರತಿ ತಲುಪಿದ ಬಳಿಕ ಬಿಡುಗಡೆ ಆಗಲಿದ್ದಾರೆ.
4 ಭಾರಿ ಸಂಸದರಾಗಿರುವ ಸಂಜಯ್ ರಾವುತ್, ಸಾಮ್ನಾ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರೂ ಹೌದು. ಆಗಸ್ಟ್ 1ರಂದು ಇ.ಡಿ ಅವರನ್ನು ಬಂಧಿಸಿತ್ತು. ಜುಲೈ 31ರಂದು ಇ.ಡಿ. ರಾವುತ್ ಅವರ ನಿವಾಸ ಮೈತ್ರಿ ಬಂಗಲೆ ಮೇಲೆ ದಾಳಿ ನಡೆಸಿತ್ತು. ವಿಚಾರಣೆ ಬಳಿಕ ಮಧ್ಯರಾತ್ರಿ ಅವರನ್ನು ಬಂಧಿಸಿತ್ತು.