ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರ ಅಧಿವೇಶಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15ರಿಂದ ಜುಲೈ 26ರವರೆಗೆ ಹತ್ತುದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದ ದಿನಾಂಕ ನಿಗದಿಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ.
ಇನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆಡಳಿತದಲ್ಲಿನ ಲೋಪ ಎತ್ತಿ ಸರ್ಕಾರ ಮೇಲೆ ಮುಗಿಬೀಳಲು ಸಜ್ಜಾಗಿವೆ. ಅದರಲ್ಲೂ ಮುಖ್ಯವಾಗಿ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಲಿವೆ.
ಈ ಮುಂಗಾರು ಅಧಿವೇಶಷನದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ. ಇಂಧನ, ಹಾಲ ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿವೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ, ಮೈಸೂರು ಮುಡಾದಲ್ಲಿನ ಹಗರಣಗಳನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕುವ ತಂತ್ರವನ್ನು ಬಿಜೆಪಿ-ಜೆಡಿಎಸ್ ಮಾಡಿವೆ.
ಮತ್ತೊಂದೆಡೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ, ವಿಪಕ್ಷಗಳ ಆರೋಪ, ಪ್ರಶ್ನೆಗಳನ್ನು ಹೇಗೆ ಎದುರಿಸುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.