ಮನೆ ರಾಜ್ಯ ಬಿ.ಎಲ್ .ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡುವಂತೆ ಮಲೆನಾಡು ಕರಾವಳಿ ಒಕ್ಕೂಟ ಆಗ್ರಹ

ಬಿ.ಎಲ್ .ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡುವಂತೆ ಮಲೆನಾಡು ಕರಾವಳಿ ಒಕ್ಕೂಟ ಆಗ್ರಹ

0

ಬೆಂಗಳೂರು: ಮಲೆನಾಡು ಭಾಗದ ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ.ಎಲ್. ಶಂಕರ್ ಅವರನ್ನು ರಾಜ್ಯ ಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಮಲೆನಾಡು ಕರಾವಳಿ ಒಕ್ಕೂಟ ಆಗ್ರಹಿಸಿದೆ.

ಬೆಂಗಳೂರು ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ, ಕಾಂಗ್ರೆಸ್ ವಕ್ತಾರ, ಸುದೀರ್ ಮುರೋಳಿ, ಬಿ.ಎಲ್. ಶಂಕರ್ ಅವರು ಹಿರಿಯ ರಾಜಕಾರಣಿಯಾಗಿದ್ದು ಅವರು ಉತ್ತಮ ವಾಗ್ಮಿಯಾಗಿದ್ದು, ಈ ಹಿಂದೆ ಜನಮೆಚ್ಚುವ ಸಭಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.ಕರ್ನಾಟಕದ ಯಾವುದೇ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸುವ ಶಕ್ತಿಯನ್ನು ಬಿ.ಎಲ್. ಶಂಕರ್ ಹೊಂದಿದ್ದಾರೆ. ಈಗಿರುವ ಮಲೆನಾಡು, ಕರಾವಳಿ ಭಾಗದ ಸಂಸದರಾದ ಶೋಭಾ ಕರಂದ್ಲಾಜೆ, ರಾಘವೇಂದ್ರ ಅವರು ಯಾವುದೇ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗ್ಗೆಹರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಸ್ತೂರಿ ರಂಗನ್ ವರದಿ ಸಮಸ್ಯೆಯನ್ನು ಕುರಿತಂತೆ ಸಮರ್ಥವಾಗಿ ಬಗೆಹರಿಸುವಲ್ಲಿ ವಿಫಲಗೊಂಡಿದ್ದಾರೆ ಹಾಗಾಗಿ‌ ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗೆಹರಿಸಲು ಬಿ.ಎಲ್.ಶಂಕರ್ ಸಮರ್ಥ ವ್ಯಕ್ತಿ ಯಾಗಿದ್ದಾರೆ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕು ಎಂದರು.

ಮಲೆನಾಡು ಕರಾವಳಿ ಭಾಗದ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅನೇಕ ಸಂದರ್ಭಗಳಲ್ಲಿ ಸರ್ಕಾರ ವಿಫಲಗೊಂಡಿವೆ. ಮಲೆನಾಡು ಕರಾವಳಿ ಭಾಗದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ.ತುಳುನಾಡು ಆಕಾಡೆಮಿ ಆಗುವ ಅವಶ್ಯಕತೆ ಇದೆ.ಜತೆಗೆ ಮಲೆನಾಡಿನಲ್ಲಿ ಆನೆಗಳ ಹಾವಳಿ ಸಮಸ್ಯೆಯಿಂದ ರೈತರು ನಲುಗಿ ಹೋಗಿದ್ದಾರೆ.ಈ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಬೇಕಾದರೆ ಬಿ.ಎಲ್.ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಹೇಳಿದರು.

ಭಾರತದ ರಾಷ್ಟ್ರದ್ವಜ ಹಾರಿಸಿದರೆ ಅದನ್ನು ಸಿ.ಟಿ.ರವಿಯವರು ತಾಲಿಭಾನ್ ದ್ವಜವೆಂದು ಹೇಳುವುದು ಸರಿಯಲ್ಲ. ದ್ವಜ ಹಾರಿಸುವ ವಿಚಾರ ಇಟ್ಟುಕೊಂಡು ಬಿಜೆಪಿಯವರು ಗಲಭೆ ನಡೆಸುವುದು ಎಷ್ಟರ ಮಟ್ಟಿಗೆ ಸರಿ ಎಂದು ತಿಳಿಸಿದರು.

ಹಿಂದಿನ ಲೇಖನಪ್ರಗತಿ ಮೊಬೈಲ್ ಅಪ್ಲಿಕೇಶನ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಂದಿನ ಲೇಖನಕೆರೆಗೋಡು ಘಟನೆ ಬಿಜೆಪಿಯ ಧ್ರುವೀಕರಣ ತಂತ್ರದ ಭಾಗ: ಎಂ ಬಿ ಪಾಟೀಲ