ಬೆಂಗಳೂರು: ಮಲೆನಾಡು ಭಾಗದ ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ.ಎಲ್. ಶಂಕರ್ ಅವರನ್ನು ರಾಜ್ಯ ಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಮಲೆನಾಡು ಕರಾವಳಿ ಒಕ್ಕೂಟ ಆಗ್ರಹಿಸಿದೆ.
ಬೆಂಗಳೂರು ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ, ಕಾಂಗ್ರೆಸ್ ವಕ್ತಾರ, ಸುದೀರ್ ಮುರೋಳಿ, ಬಿ.ಎಲ್. ಶಂಕರ್ ಅವರು ಹಿರಿಯ ರಾಜಕಾರಣಿಯಾಗಿದ್ದು ಅವರು ಉತ್ತಮ ವಾಗ್ಮಿಯಾಗಿದ್ದು, ಈ ಹಿಂದೆ ಜನಮೆಚ್ಚುವ ಸಭಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.ಕರ್ನಾಟಕದ ಯಾವುದೇ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸುವ ಶಕ್ತಿಯನ್ನು ಬಿ.ಎಲ್. ಶಂಕರ್ ಹೊಂದಿದ್ದಾರೆ. ಈಗಿರುವ ಮಲೆನಾಡು, ಕರಾವಳಿ ಭಾಗದ ಸಂಸದರಾದ ಶೋಭಾ ಕರಂದ್ಲಾಜೆ, ರಾಘವೇಂದ್ರ ಅವರು ಯಾವುದೇ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗ್ಗೆಹರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಸ್ತೂರಿ ರಂಗನ್ ವರದಿ ಸಮಸ್ಯೆಯನ್ನು ಕುರಿತಂತೆ ಸಮರ್ಥವಾಗಿ ಬಗೆಹರಿಸುವಲ್ಲಿ ವಿಫಲಗೊಂಡಿದ್ದಾರೆ ಹಾಗಾಗಿ ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗೆಹರಿಸಲು ಬಿ.ಎಲ್.ಶಂಕರ್ ಸಮರ್ಥ ವ್ಯಕ್ತಿ ಯಾಗಿದ್ದಾರೆ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕು ಎಂದರು.
ಮಲೆನಾಡು ಕರಾವಳಿ ಭಾಗದ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅನೇಕ ಸಂದರ್ಭಗಳಲ್ಲಿ ಸರ್ಕಾರ ವಿಫಲಗೊಂಡಿವೆ. ಮಲೆನಾಡು ಕರಾವಳಿ ಭಾಗದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ.ತುಳುನಾಡು ಆಕಾಡೆಮಿ ಆಗುವ ಅವಶ್ಯಕತೆ ಇದೆ.ಜತೆಗೆ ಮಲೆನಾಡಿನಲ್ಲಿ ಆನೆಗಳ ಹಾವಳಿ ಸಮಸ್ಯೆಯಿಂದ ರೈತರು ನಲುಗಿ ಹೋಗಿದ್ದಾರೆ.ಈ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಬೇಕಾದರೆ ಬಿ.ಎಲ್.ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಹೇಳಿದರು.
ಭಾರತದ ರಾಷ್ಟ್ರದ್ವಜ ಹಾರಿಸಿದರೆ ಅದನ್ನು ಸಿ.ಟಿ.ರವಿಯವರು ತಾಲಿಭಾನ್ ದ್ವಜವೆಂದು ಹೇಳುವುದು ಸರಿಯಲ್ಲ. ದ್ವಜ ಹಾರಿಸುವ ವಿಚಾರ ಇಟ್ಟುಕೊಂಡು ಬಿಜೆಪಿಯವರು ಗಲಭೆ ನಡೆಸುವುದು ಎಷ್ಟರ ಮಟ್ಟಿಗೆ ಸರಿ ಎಂದು ತಿಳಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.