ಗದಗ: ನಗರದ ಗಂಗಾಪುರ ಪೇಟೆ ಹೊಂಬಳ ರೇಲ್ವೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ಸಂಸದ ಬಸವರಾಜ್ ಬೊಮ್ಮಾಯಿ ವೀಕ್ಷಿಸಿದರು.
ಗದಗ-ಹೊಂಬಳಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ 2017 ರಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದ್ದು, ಸ್ಥಳೀಯರ ವಿರೋಧ ಹಾಗೂ ತಾಂತ್ರಿಕ ಕಾರಣದಿಂದ ಕುಂಟುತ್ತ ಸಾಗಿದೆ.
ಈ ಹಿನ್ನಲೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಸಂಸದರು ಸಮಸ್ಯೆ ಬಗೆಹರಿಸಿ ಕಾಮಗಾರಿಗೆ ಅನುಕೂಲ ಮಾಡುಕೊಂಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಚಂದ್ರ ಲಮಾಣಿ, ಅಧಿಕಾರಿಗಳು ಉಪಸ್ಥಿತರಿದ್ದರು.
Saval TV on YouTube