ಮಂಡ್ಯ(Mandya): ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವವರು ಎಲ್ಲಾ ಕಡೆ ಇದ್ದರೆ ನಾನೇನು ಮಾಡಲು ಸಾಧ್ಯ? ಎಂದು ಸಂಸದೆ ಸುಮಲತಾ ಹೇಳಿದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ನಾನು ಪಾಂಡವಪುರ ಶಾಸಕ, ಮದ್ದೂರು ಶಾಸಕ ಅಥವಾ ಮಳವಳ್ಳಿ ಶಾಸಕ ಎಂದು ಯಾವುದೇ ಪಕ್ಷ, ಶಾಸಕರ ಹೆಸರು ಪ್ರಸ್ತಾಪ ಮಾಡಿಲ್ಲ. ಯಾರನ್ನೂ ಗುರಿಯಾಗಿಸಿಕೊಂಡು ಹೇಳಿದ ಮಾತಲ್ಲ. ಅವರವರೇ ವೀರಾವೇಶದಿಂದ ನನ್ನ ಬಗ್ಗೆ ಆರೋಪ ಮಾಡುತ್ತಾ ಮಾತನಾಡುತ್ತಿದ್ದಾರೆ. ನಾನು ಯಾರಿಗೆ ಹೇಳಿದೆನೋ ಅದು ಅವರಿಗೆ ಖಂಡಿತ ತಟ್ಟೇ ತಟ್ಟುತ್ತೆ ಎಂದು ಮತ್ತೆ ಕುಟುಕಿದರು.
ಜೆಡಿಎಸ್ ಶಾಸಕರ ವಿರುದ್ದ ಕಿಡಿಕಾರಿದ ಸಂಸದೆ, ಮಂಡ್ಯ ರಾಜಕಾರಣವೇ ಬೇರೆ ರೀತಿ ಇದೆ. ಪ್ರತಿ ತಾಲ್ಲೂಕಿನಲ್ಲೂ ನಾನು ಕೆಡಿಪಿ ಸಭೆ ಮಾಡಿಕೊಂಡು ಬಂದೆ. ಆದರೆ ಶಾಸಕರು ಸೇರಿ ಎಂಪಿ ಏನಿದ್ದರೂ ದಿಶಾ ಸಭೆ ಮಾತ್ರ ನಡೆಸಬೇಕು. ತಾಲೂಕು ಮಟ್ಟದಲ್ಲಿ ಸಭೆ ಮಾಡಲು ಅಧಿಕಾರ ಇಲ್ಲ ಎಂದು ಪತ್ರ ಬರೆದು ಅದನ್ನು ನಿಲ್ಲಿಸಿಯೇ ಬಿಟ್ಟರು ಎಂದು ಆಪಾದಿಸಿದರು.
ಕೆ ಆರ್ ನಗರದಲ್ಲಿ ಕೆಲವು ತಿಂಗಳ ಹಿಂದೆ ಗಲಾಟೆ ಆಯ್ತು. ಅಲ್ಲಿ ಹೋದಾಗ, ಅಲ್ಲಿಗೆ ಬಂದಿದ್ದ ಅಧಿಕಾರಿಗಳನ್ನು ಕರೆ ಮಾಡಿ ವಾಪಸ್ ಕರೆಸಿಕೊಳ್ತಾರೆ. ನಂತರ ನನ್ನ ಮೇಲೆ ಹಲ್ಲೆ ಮಾಡೋಕೆ ಗೂಂಡಾಗಳನ್ನು ಕಳುಹಿಸುತ್ತಾರೆ. ಎಂಪಿ ಇಲ್ಲಿಗೆ ಬರಬಾರದು ಎಂದು ಹೆದರಿಸುತ್ತಾರೆ ಎಂದು ಆರೋಪಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.