ಮನೆ ಅಪರಾಧ ಕೆ.ಆರ್.ಎಸ್ ಮೇಲೆ ಸಂಸದೆ ಸುಮಲತಾ ಫೋಟೊಶೂಟ್: ಕಾನೂನು ಕ್ರಮಕ್ಕೆ ಆಗ್ರಹ

ಕೆ.ಆರ್.ಎಸ್ ಮೇಲೆ ಸಂಸದೆ ಸುಮಲತಾ ಫೋಟೊಶೂಟ್: ಕಾನೂನು ಕ್ರಮಕ್ಕೆ ಆಗ್ರಹ

0

ಮಂಡ್ಯ(Mandya): ಕೃಷ್ಣರಾಜಸಾಗರ ಅಣೆಕಟ್ಟು ಮೇಲೆ ಬೆಂಬಲಿಗರೊಂದಿಗೆ ಸಂಸದೆ ಸುಮಲತಾ ಫೋಟೋಶೂಟ್ ಮಾಡಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಂಸದರು ಕೆಆರ್​ಎಸ್ ಡ್ಯಾಂ ಮೇಲೆ ಫೋಟೋ ಶೂಟ್ ಮಾಡಿಸಿರುವುದನ್ನು ನೋಡಿದ್ದೇನೆ. ಭಾರತ ದೇಶದ ಬಾವುಟ ಹಿಡಿದು ಬಹಳ ಅಭಿಮಾನ ಪ್ರೀತಿ ತೋರಿಸಿದ್ದಾರೆ. ಕೆಆರ್​ಎಸ್​ ಡ್ಯಾಮ್​ ಮೇಲೆ ಬೇರೆ ಯಾರಾದರೂ ಫೋಟೋ ಶೂಟ್​ ಮಾಡಿಸಿದ್ದರೆ, ಇಷ್ಟೊತ್ತಿಗೆ ಅವರ ವಿರುದ್ಧ ಎಫ್​ಐಆರ್​ ದಾಖಲಾಗುತ್ತಿತ್ತು ಎಂದರು.

ಜನಸಾಮಾನ್ಯರು, ಜನಪ್ರತಿನಿಧಿಗಳು ಎಲ್ಲರಿಗೂ ಕಾನೂನು ಒಂದೇ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಹಿಂದಿನ ಲೇಖನವಿಶ್ವದಲ್ಲಿ 35,000 ಕ್ಕೂ ಹೆಚ್ಚು ಮಂಕಿಪಾಕ್ಸ್‌ ಪ್ರಕರಣ: ವಿಶ್ವ ಆರೋಗ್ಯ ಸಂಸ್ಥೆ
ಮುಂದಿನ ಲೇಖನಮಹಿಳೆ ಪ್ರಚೋದನಕಾರಿ ಉಡುಗೆ ತೊಟ್ಟರೆ ಲೈಂಗಿಕ ಕಿರುಕುಳ ಪ್ರಕರಣ ಮೇಲ್ನೋಟಕ್ಕೆ ನಿಲ್ಲದು: ಕೇರಳ ನ್ಯಾಯಾಲಯ