ಚಂಡೀಗಢ: ಡೇರಾ ಮಾಜಿ ಅಧಿಕಾರಿ ರಂಜಿತ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇಂದು ದೋಷಮುಕ್ತಗೊಳಿಸಿದೆ.
ಡೇರಾದ ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿದ್ದ ರಂಜಿತ್ ಸಿಂಗ್ ಅವರನ್ನು 2002 ರಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.
ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂ ಸಿಂಗ್ ಹಾಗೂ ಇತರೆ ಐವರನ್ನು 2021 ರಲ್ಲಿ ಪಂಚಕುಲದ ಸಿಬಿಐ ನ್ಯಾಯಾಲಯ, ಅಪರಾಧಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ಹಾಗೂ 31 ಲಕ್ಷ ರೂಪಾಯಿ ದಂಡವನ್ನು ಪಾವತಿಸುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ರಾಮ್ ರಹೀಮ್ ಸಿಂಗ್ ಮತ್ತು ಇತರರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತ ತೀರ್ಪು ಇಂದು ಹೊರ ಬಿದ್ದಿದೆ. ಪಂಚಕುಲ ಸಿಬಿಐ ನ್ಯಾಯಾಲಯದ ಜೀವಾವಧಿ ಶಿಕ್ಷೆಯ ಆದೇಶವನ್ನು ತಳ್ಳಿ ಹಾಕಿರುವ ಹೈಕೋರ್ಟ್, ಗುರ್ಮೀತ್ ರಾಮ್ ರಹಿಂ ಸಿಂಗ್ ಮತ್ತು ಇತರ ಇವರನ್ನು ನಿರ್ದೋಷಿಗಳೆಂದು ಘೋಷಿಸಿ ತೀರ್ಪು ನೀಡಿದೆ.
ಆದರೆ ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಮ್ ರಹೀಮ್ ಸದ್ಯ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿದ್ದಾರೆ. ಅತ್ಯಾಚಾರ ಎಸಗಿದ ಆರೋಪಕ್ಕಾಗಿ ಪ್ರಸ್ತುತ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.