ಮನೆ ಅಪರಾಧ ಮುರುಘಾ ಶ್ರೀ ಪ್ರಕರಣ: ಐದನೇ ಆರೋಪಿ ಪೊಲೀಸರಿಗೆ ಶರಣು

ಮುರುಘಾ ಶ್ರೀ ಪ್ರಕರಣ: ಐದನೇ ಆರೋಪಿ ಪೊಲೀಸರಿಗೆ ಶರಣು

0

ಚಿತ್ರದುರ್ಗ(Chitradurga):  ವಿದ್ಯಾರ್ಥಿಗಳ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣದ 5ನೇ ಆರೋಪಿ ವಕೀಲ ಗಂಗಾಧರಯ್ಯ ಪೊಲೀಸರ ಬಳಿ ಶರಣಾಗಿದ್ದಾರೆ.

ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ  ಪೊಲೀಸರಿಗೆ ಶರಣಾಗಿದ್ದು,  ಚಿತ್ರದುರ್ಗದ ಡಿವೈಎಸ್​ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಯುತ್ತಿದೆ.

ಪ್ರಕರಣದ 3ನೇ ಆರೋಪಿಯಾಗಿರುವ ಮಠದ ಉತ್ತರಾಧಿಕಾರಿ ಮತ್ತು 4ನೇ ಆರೋಪಿ ಪರಮಶಿವಯ್ಯ ಈವರೆಗೆ ಪೊಲೀಸರಿಗೆ ಸಿಕ್ಕಿಲ್ಲ. ಹೀಗಾಗಿ ಅವರ ಬಂಧನಕ್ಕಾಗಿ ಹುಡುಕಾಟ ಮುಂದುವರಿದಿದೆ. ಇನ್ನು  ಪ್ರಕರಣದ ಮುಖ್ಯ ಆರೋಪಿ ಮುರುಘಾ ಶ್ರೀಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹಿಂದಿನ ಲೇಖನಮೈಸೂರು: ಮನೆ ಕುಸಿದು ಕೂಲಿ ಕಾರ್ಮಿಕ ಸಾವು
ಮುಂದಿನ ಲೇಖನಜಾರಿ ನಿರ್ದೇಶನಾಲಯದ ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ