ಮನೆ ರಾಜಕೀಯ ಪೀಠಕ್ಕೆ ನೀಡಿರುವ ಕಾಣಿಕೆ ವಾಪಸ್ ಕೇಳುವ ಸಣ್ಣವ ನಾನಲ್ಲ: ಮುರುಗೇಶ್ ನಿರಾಣಿ

ಪೀಠಕ್ಕೆ ನೀಡಿರುವ ಕಾಣಿಕೆ ವಾಪಸ್ ಕೇಳುವ ಸಣ್ಣವ ನಾನಲ್ಲ: ಮುರುಗೇಶ್ ನಿರಾಣಿ

0

ಮೈಸೂರು: ‘ದಾನ ನೀಡಿರುವುದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಹೊರತು ಅದರ ಸ್ವಾಮೀಜಿಗೆ ಅಲ್ಲ. ಪೀಠಕ್ಕೆ ನೀಡಿರುವ ಕಾಣಿಕೆಯನ್ನು ವಾಪಸ್ ಕೇಳುವಷ್ಟು ಸಣ್ಣವ ನಾನಲ್ಲ. ಅಂತಹ ಮನಸ್ಥಿತಿಯೂ ನನ್ನದ್ದಲ್ಲ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಾಪಸ್ಸು ಕೇಳಿದ್ದೇನೆ ಎಂಬುದು ಸುಳ್ಳು. ಸ್ವಾಮೀಜಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ದೂರವಾಣಿ ಮೂಲಕ ಸ್ವಾಮೀಜಿ ಜತೆ ಮಾತನಾಡಿಯಾದರೂ ಸ್ಪಷ್ಟನೆ ನೀಡುತ್ತೇನೆ’ ಎಂದು ತಿಳಿಸಿದರು.

Advertisement
Google search engine

ರಾಜ್ಯದಲ್ಲಿ ಪಂಚಮಸಾಲಿ 3ನೇ ಪೀಠ ಸ್ಥಾಪನೆಯ ಹಿಂದೆ ನಾನಿಲ್ಲ. ಆದರೆ, ನನ್ನ ಬೆಂಬಲ ಈ ಪೀಠಕ್ಕೆ ಇದೆ. ಎರಡು ಪೀಠಗಳ ಸ್ವಾಮೀಜಿಗಳ ಒತ್ತಡ ಕಡಿಮೆ ಮಾಡಲು ಈ ಪೀಠದ ಅಗತ್ಯ ಇದೆ. ವಚನಾನಂದ ಸ್ವಾಮೀಜಿ ಸೇರಿ ಹಲವರು ಬೆಂಬಲಿಸಿದ್ದಾರೆ. ಪೀಠ ಸ್ಥಾಪನೆಯ ಹಿಂದೆ ದುರುದ್ದೇಶದ ಪ್ರಶ್ನೆಯೇ ಇಲ್ಲ. ಸಮುದಾಯದ ಜನಸಂಖ್ಯೆ ಹೆಚ್ಚಿರುವ ಕಾರಣ 3ನೇ ಪೀಠದ ಅವಶ್ಯಕತೆ ಇದೆ ಎಂದು ಅವರು ಇಲ್ಲಿ ಪ್ರತಿಪಾದಿಸಿದರು.

‘ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಪರಮಾಧಿಕಾರ. ಅದರಲ್ಲಿ ನಮ್ಮ ಪಾತ್ರಗಳು ಏನು ಇಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದರು.

ಹಿಂದಿನ ಲೇಖನನಾಳೆಯಿಂದ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ
ಮುಂದಿನ ಲೇಖನಪ್ರೊ.ಎಂ.ವೆಂಕಟೇಶ್ ಕುಮಾರ್ ಗೆ ಕಾಳಿದಾಸ ಸಮ್ಮಾನ್ ಪ್ರಶಸ್ತಿ