ಮನೆ ರಾಜ್ಯ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಶಾಸಕ ಕೆ.ಗೋಪಾಲಯ್ಯ ಅವರಿಂದ ಅಭಿನಂದನೆ

ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಶಾಸಕ ಕೆ.ಗೋಪಾಲಯ್ಯ ಅವರಿಂದ ಅಭಿನಂದನೆ

0

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ನಾಡಿನ ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಗೋಪಾಲಯ್ಯನವರು ಹಂಸಲೇಖ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಅಭಿನಂದಿಸಿದರು.

ನಂತರ ಮಾತನಾಡಿದವರು ಸಾಂಸ್ಕೃತಿಕ ನಗರಿ ಎಂದೇ ಖ್ಯಾತಿ ಪಡೆದಿರುವ ಮೈಸೂರಿನಲ್ಲಿ ಈ ಬಾರಿ ನಡೆಯಲಿರುವ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ತಮ್ಮನ್ನು ಆಯ್ಕೆ ಮಾಡಿರುವುದು ನಮ್ಮೆಲ್ಲರಿಗೂ ಸಂತಸವನ್ನುಂಟು ಮಾಡಿದೆ ಎಂದು ಶುಭಕೋರಿದರು.

ಇದೇ ಸಂದರ್ಭದಲ್ಲಿ ಮಾಜಿ ಉಪಮೇಯರ್ ಎಸ್.ಹರೀಶ್,  ವೆಂಕಟೇಶ್, ಶ್ರೀನಿವಾಸ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.

ಹಿಂದಿನ ಲೇಖನಮಹಿಳಾ ಸಮಾನತೆಯಿಂದ ಸಮ‌ ಸಮಾಜ ಸ್ಥಾಪನೆ: ಸಿದ್ದರಾಮಯ್ಯ ಟ್ವೀಟ್
ಮುಂದಿನ ಲೇಖನಎಥೆನಾಲ್‌ ಇಂಧನದಿಂದ ಕಾರ್ಯನಿರ್ವಹಿಸುವ ಟೊಯೊಟಾ ಇನ್ನೋವಾ ಹೈಕ್ರಾಸ್‌ ಎಂಪಿವಿ ಕಾರು ಬಿಡುಗಡೆ