ಮನೆ ಸುದ್ದಿ ಜಾಲ ಜೈ ಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿ

ಜೈ ಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿ

0

ಮಂಡ್ಯ: ಕೇಸರಿ ಶಾಲು ಮತ್ತು ಹಿಜಾಬ್ ವಿವಾದ ಮಂಡ್ಯದಲ್ಲಿಯೂ ತೀವ್ರ ಸ್ವರೂಪ ಪಡೆಯುತ್ತಲಿದ್ದು, ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ‌ ಶಾಲು ಹಾಕಿಕೊಂಡು ಹಿಜಾಬ್​ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ  ವೇಳೆ ಮುಸ್ಲಿಂ ವಿದ್ಯಾರ್ಥಿ ನೂರಾರು ಯುವಕರ ಎದುರೇ ಧೈರ್ಯವಾಗಿಯೇ ಹೋರಾಟ ನಡೆಸಿದ್ದಾರೆ.

ವಿದ್ಯಾರ್ಥಿಗಳು ಕಾಲೇಜಿನ‌ ಮುಂದೆ ಕೇಸರಿ ಶಾಲು ಹಾಕಿಕೊಂಡು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಹಿಜಾಬ್​ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಇದೇ ವೇಳೆ ಕಾಲೇಜ್​ಗೆ ಆಗಮಿಸಿದ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದರು.

ಇದರಿಂದ ಕೆರಳಿದ ವಿದ್ಯಾರ್ಥಿಗಳು ಆಕೆಯತ್ತ ನುಗ್ಗಿ ಬಂದರು. ತಕ್ಷಣವೇ ಎಚ್ಚೆತ್ತುಕೊಂಡ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಗಳ ಗುಂಪನ್ನು ತಡೆದರು. ಪೊಲೀಸರು ಸ್ಥಳಕ್ಕಾಗಮಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದರು.

ಈ ಸಂದರ್ಭ ವಿದ್ಯಾರ್ಥಿಗಳು ಶಾಲಾ ಮಂಡಳಿ ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದರು.  ಕೇಸರಿ ಶಾಲು ಹಾಕಿಕೊಂಡ ಬಂದಿದ್ದೇವೆ ನಮಗೆ ಒಳಗೆ ಹೋಗಲು ಅವಕಾಶ ಕೊಡುತ್ತಿಲ್ಲ. ಆದರೆ, ಬುರ್ಕಾ ಹಾಕಿಕೊಂಡು ಬಂದವರಿಗೆ ಅವಕಾಶ ಕೊಟ್ಟಿದ್ದೀರಿ. ಅವರನ್ನು ಕಾಲೇಜ್​ನಿಂದ ಹೊರಗೆ ಕಳುಹಿಸಿ ಅಂತ ಎಂದು ನಾವು ಹೇಳುತ್ತಿಲ್ಲ. ಅವರ ಹಿಜಾಬ್​, ಬುರ್ಕಾ ತೆಗೆಸಿ. ನಾವು ಕೇಸರಿ ಶಾಲನ್ನು ತೆಗೆದು ಬರುತ್ತೇವೆ ಎಂದು ವಿದ್ಯಾರ್ಥಿಗಳು ಕಾಲೇಜಿನ ಮುಖ್ಯ ಶಿಕ್ಷಕರ ಜೊತೆ ವಾಗ್ವಾದ ನಡೆಸಿದರು.

ಹಿಂದಿನ ಲೇಖನದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಮುಂದಿನ ಲೇಖನಆಸ್ಪತ್ರೆಯಿಂದ ಇಂದು ಶಾಸಕ ತನ್ವೀರ್ ಸೇಠ್ ಡಿಸ್ಚಾರ್ಜ್: ಅಭಿಮಾನಿಗಳಿಂದ ವಿಶೇಷ ಪೂಜೆ