ಮನೆ ಸ್ಥಳೀಯ ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ: ಎಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ...

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ: ಎಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

0

ಮೈಸೂರು:  ಪೆನ್ ಡ್ರೈವ್ ಪ್ರಕರಣದಲ್ಲಿ ರಾಕೇಶ್ ಸಿದ್ದರಾಮಯ್ಯ ವಿಚಾರದ ತೆಗೆದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. “ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಇನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮುರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್‌ ವಿಚಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು.

Join Our Whatsapp Group

ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು‌ 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ಉತ್ತರ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ. ಸುಮ್ಮನೆ ಕಾಲ ಕಳೆಯುವುದನ್ನು ಬಿಡಬೇಕು ಎಂದರು.

ರೇಪ್ ಗಿಂತ ಅದರ ವಿಡಿಯೋ ಹಂಚಿದ್ದು ದೊಡ್ಡ ಅಫರಾದ ಎಂಬ ಎಚ್ ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ಸಿಎಂ, ಅತ್ಯಾಚಾರಕ್ಕಿಂತ ವಿಡಿಯೋ ಹಂಚಿದ್ದು ದೊಡ್ಡ ಅಫರಾದ ಎಂದು ಯಾವ ಕಾನೂನುನಿಲ್ಲಿದೆ ಹೇಳಿ. ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದರಾ. ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ. ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಿ? ನಾನು ಹಾಗಂತ ವಿಡಿಯೋ ವಿತರಣೆ ಸಮರ್ಥನೆ ಮಾಡುತ್ತಿಲ್ಲ. ಆದರೆ ಅತ್ಯಾಚಾರಕ್ಕಿಂತ ವಿಡಿಯೋ ಹಂಚಿದ್ದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದರು.

ಹಿಂದಿನ ಲೇಖನದಾವಣಗೆರೆ ಯುವಕನ ಸಾವು ಲಾಕಪ್ ಡೆತ್ ಅಲ್ಲ: ಸಿಎಂ ಸಿದ್ದರಾಮಯ್ಯ  
ಮುಂದಿನ ಲೇಖನಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ – ಮುಖ್ಯಮಂತ್ರಿ ಸಿದ್ದರಾಮಯ್ಯ