ಮನೆ ಮನರಂಜನೆ ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ: ನಟ ಸುದೀಪ್

ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ: ನಟ ಸುದೀಪ್

0

ಬೆಂಗಳೂರು: ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ತಿಳಿಸಿದರು.

Join Our Whatsapp Group

ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು,  ಕಷ್ಟದ ದಿನಗಳಲ್ಲಿ ನನ್ನ ಜೊತೆಗೆ ನಿಂತಿದ್ದು ಸಿಎಂ ಬೊಮ್ಮಾಯಿಯವರು. ನಾನು ಚಿಕ್ಕವಯಸ್ಸಿನಿಂದ ಅವರನ್ನು ನೋಡಿದ್ದೇನೆ. ಚಿತ್ರರಂಗಕ್ಕೆ ಬಂದಾಗ ಕೆಲವೇ ಕೆಲವರು ನನ್ನ ಪರ ನಿಂತಿದ್ದರು. ಅಂತಹವರು ನನ್ನ ಮಾಮ ಸಿಎಂ ಬೊಮ್ಮಾಯಿ. ನಾನು ಅವರ ಪರವಾಗಿ ನಿಲ್ಲಲು ಬಂದೆ ಎಂದಿದ್ದಾರೆ.

ನಾನು ಚಿತ್ರರಂಗ ಪ್ರವೇಶಿಸುವಾಗ ಗಾಡ್ ಫಾದರ್ ಅಂತ ಯಾರು ಇರಲಿಲ್ಲ. ಆ ಟೈಮ್ ನಲ್ಲಿ ಅವರು ನನ್ನ ಪರ ಇದ್ದರು. ಹೀಗಾಗಿ ನಾನು ಆ ವ್ಯಕ್ತಿ ಪರ ಬೆಂಬಲ ಕೊಡೋಕೆ ಬಂದಿದ್ದೀನಿ. ಹಾಗೆ ಕೆಲ ಸ್ನೇಹಿತರು ಇದ್ದಾರೆ. ಅವರ ಪರವೂ ನಿಲ್ಲುತ್ತೇನೆ ಎಂದು ತಿಳಿಸಿದರು.

ನನ್ನ ಲೈಫ್ ನಲ್ಲಿ ಬೊಮ್ಮಾಯಿಯವರು ಒಳ್ಳೆಯ ಸ್ಥಾನದಲ್ಲಿದ್ದಾರೆ. ಅವರು ಎಲ್ಲಿ ಹೇಳುತ್ತಾರೋ ಅಲ್ಲಿ ಕೆಲಸ ಮಾಡಲು ಸಿದ್ಧನಿದ್ದೇನೆ. ತಯಾರಿದ್ದೇನೆ. ಬೊಮ್ಮಾಯಿ ಬೇರೆ ಪಕ್ಷದಲ್ಲಿದ್ದರೂ ಅವರ ಜೊತೆ ನಾನು ನಿಲ್ಲುತ್ತಿದ್ದೆ. ನಾನು ಸಿಎಂ ಬೊಮ್ಮಾಯಿ ಅವರ ವಿಷಯದಲ್ಲಿ ಪಕ್ಷ ನೋಡುತ್ತಿಲ್ಲ, ವ್ಯಕ್ತಿ ನೋಡುತ್ತೇನೆ ಎಂದರು.

ನನಗೆ ಎಲ್ಲ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಆಗಲ್ಲ. ಪಕ್ಷ ಅಂತಾ ಇಲ್ಲಿಗೆ ಬಂದಿಲ್ಲ, ವ್ಯಕ್ತಿಯ ಕಾಳಜಿಗೆ ಬಂದಿದ್ದೇನೆ.  ಹಣಕ್ಕಾಗಿ ನಾನು ಚುನಾವಣಾ ಪ್ರಚಾರ ಮಾಡುತ್ತಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಮಾತ್ರ ನನ್ನ ಬೆಂಬಲ ಎಂದು ಸ್ಪಷ್ಟಪಡಿಸಿದರು.

ಹಿಂದಿನ ಲೇಖನಗೋ ಸಾಗಾಟದ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ: ಗುಜರಾತ್ ನಲ್ಲಿ ಪುನೀತ್ ಕೆರೆಹಳ್ಳಿ ಬಂಧನ
ಮುಂದಿನ ಲೇಖನಗಡಿ ಗ್ರಾಮಗಳಿಗೆ ವಿಮೆ: ಮಹಾರಾಷ್ಟ್ರದ ಉದ್ದಟತನ ಸಹಿಸಲು ಸಾಧ್ಯವಿಲ್ಲ ಎಂದ ಸಿದ್ದರಾಮಯ್ಯ