ಮೈಸೂರು(Mysuru): ಅಖಿಲ ಕರ್ನಾಟಕ ಒಕ್ಕಲಿಗರ ಮಹಾಸಭಾ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಘದ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡರು ಜೈ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಂಜೇಗೌಡರು ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಆ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ಕನ್ನಡವನ್ನು ಉಳಿಸೋಣ ಬೆಳೆಸೋಣ ಎಂದು ಹೇಳಿದರು.
ಮಹಾಸಭಾದ ಗೌರವಾಧ್ಯಕ್ಷರಾದ ಡಾ. ಸಿ.ಪಿ ಕೃಷ್ಣಕುಮಾರ್ ಅವರಿಗೆ ಕರ್ನಾಟಕದ ಪಂಪ ಪ್ರಶಸ್ತಿಯನ್ನು ಕೊಡಬೇಕೆಂದು ಇದೇ ಸಂದರ್ಭದಲ್ಲಿ ಸರ್ಕಾರವನ್ನು ಆಗ್ರಹಿಸಿದರು.
ಕರ್ನಾಟಕದಲ್ಲಿ ಕುವೆಂಪು ನಂತರ ಸಾಹಿತ್ಯ ವಲಯದಲ್ಲಿ ತನ್ನದೇ ಆದ ಹೆಸರನ್ನು ಮೂಡಿಸಿಕೊಂಡು ಬಂದಿರುವ ಸಿಪಿಕೆ ರವರು ಈ ಪ್ರಶಸ್ತಿಗೆ ಅರ್ಹರು. ಸಿಪಿಕೆ ರವರು ಕನ್ನಡದ ಆಸ್ತಿ ಇಂಥ ಮಹನೀಯರನ್ನು ಸರ್ಕಾರ ಗುರುತಿಸದಿರುವುದು ನಿಜಕ್ಕೂ ನನಗೆ ಬೇಸರ ತರಿಸಿದೆ ಎಂದರು.
ಮೈಸೂರು ಜಿಲ್ಲಾಡಳಿತ ನೀಡುವ 2022 ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ವಿಕ್ರಂ ಅಯ್ಯಂಗಾರ್ ಹಾಗೂ ಶ್ರೀ ಪಡುವಾರಳ್ಳಿ ರಾಮಕೃಷ್ಣ ಅವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಹಾಸಭಾದ ಅಧ್ಯಕ್ಷರಾದ ಎನ್. ಬೆಟ್ಟೇಗೌಡ, ಗೌರವ ಸಲಹೆಗಾರರ ಡಾ.ಬಿ.ಎನ್.ರವೀಶ್, ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ. ವೈ.ಡಿ. ರಾಜಣ್ಣ, ಮಹಾಸಭಾದ ಕೋಶಾಧ್ಯಕ್ಷ ಎಂ. ಎನ್. ಚಂದ್ರಶೇಖರ್ ಕಾರ್ಯದರ್ಶಿ ರವಿಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಲಕ್ಷ್ಮೀದೇವಿ, ಸಿರಿ ಬಾಲು, ಸುರೇಶ್ ಹಾಗೂ ಮುಂತಾದವರಿದ್ದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.