ಮನೆ ಅಪರಾಧ ಮೈಸೂರು: ಇನ್‍ಸ್ಟಾಗ್ರಾಮ್ ಪೋಸ್ಟ್ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಮೈಸೂರು: ಇನ್‍ಸ್ಟಾಗ್ರಾಮ್ ಪೋಸ್ಟ್ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

0

ಮೈಸೂರು(Mysuru): ಇನ್​ಸ್ಟಾಗ್ರಾಮ್​ ಪೋಸ್ಟ್​ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ  ಹುಣಸೂರಿನಲ್ಲಿ ನಡೆದಿದೆ.

ಅಂಗಟಹಳ್ಳಿಯ ಕುಚೇಲೇಗೌಡರ ಪುತ್ರ ಬೀರೇಶ್ (23) ಕೊಲೆಗೀಡಾದ ಯುವಕ.

ಈತನ ಸ್ನೇಹಿತರಾದ ಗೋಕುಲ್ ರಸ್ತೆಯ ಕುಟ್ಟಿ ಜಿಮ್‌ನ ತರಬೇತುದಾರ ನಿತಿನ್ ಅಲಿಯಾಸ್ ವಠಾರ ಹಾಗೂ ಕಲ್ಕುಣಿಕೆಯ ಮನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳು.

ಘಟನೆ ಹಿನ್ನೆಲೆ:

ನಿತಿನ್ ಬಗ್ಗೆ ಕೆಟ್ಟದಾಗಿ ಇನ್ಸ್ಟಾಗ್ರಾಮ್​ನಲ್ಲಿ ಬೀರೇಶ್ ಪೋಸ್ಟ್​ ಮಾಡಿದ್ದ ಎನ್ನಲಾಗ್ತಿದೆ. ಈ ಸುದ್ದಿ ಜಿಮ್​ ಟ್ರೈನರ್​ ನಿತಿನ್​ಗೆ ತಿಳಿದಿದೆ. ಇದರಿಂದ ಕೋಪಗೊಂಡ ನಿತಿನ್, ತನ್ನ ಸ್ನೇಹಿತ ಮನು ಜೊತೆ ಬೈಕಿನಲ್ಲಿ ಬೀರೇಶ್‌ನನ್ನು ಕರೆದೊಯ್ದಿದ್ದಾರೆ. ಎಪಿಎಂಸಿ ಬಳಿಯ ಬೈಪಾಸ್ ರಸ್ತೆಯಲ್ಲಿ ಈ ಪೋಸ್ಟ್​ ಬಗ್ಗೆ ಬೀರೇಶ್​ಗೆ ನಿತಿನ್​ ಪ್ರಶ್ನಿಸಿದ್ದಾನೆ. ತಾನು ಈ ಪೋಸ್ಟ್​ ಮಾಡಿಲ್ಲ ಎಂಬುದು ಬೀರೇಶ್ ವಾದವಾಗಿತ್ತು.

ಈ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಇದು ಹೇಗಾಗಿದೆ ಗೊತ್ತಿಲ್ಲ ಎನ್ನುತ್ತಿದ್ದಂತೆ ನಿನಗೊಂದು ಗತಿ ಕಾಣಿಸುತ್ತೇನೆ ಎಂದು ಬೆನ್ನು, ಕುತ್ತಿಗೆ ಬಾಗಕ್ಕೆ ನಿತಿನ್ ಚಾಕುವಿನಿಂದ ಇರಿದಿದ್ದಾನೆ. ನೋವಿನಿಂದ ಜೋರಾಗಿ ಚೀರಿದಾಗ ಅಲ್ಲಿದ್ದ ಮರದ ವ್ಯಾಪಾರಿಯೊಬ್ಬರು ಆತನ ರಕ್ಷಣೆಗೆ ಬಂದಿದ್ದಾರೆ. ಆ ವ್ಯಾಪಾರಿಯನ್ನು ನೋಡಿದ ನಿತಿನ್​ ಮತ್ತು ಮನು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಕೂಡಲೇ ಆ ವ್ಯಾಪಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಿರೇಶ್​ನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಶಿಫ್ಟ್​ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಬೀರೇಶ್​ ಸಾವನ್ನಪ್ಪಿದ್ದಾರೆ. ಈ ಸುದ್ದಿ ತಿಳಿದ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿತ್ತು. ಆರೋಪಿಗಳು ತಲೆ ಮರೆಸಿಕೊಂಡಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನಭೂಪಟ ವಿರೂಪಗೊಳಿಸಿದ್ದು, ಕನ್ನಡಿಗರಿಗೆ ಮಾಡಿದ ಅವಮಾನ: ಬಿಜೆಪಿ
ಮುಂದಿನ ಲೇಖನಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ