ಮನೆ ರಾಜ್ಯ ಮೈಸೂರು: ರೈಲಿಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕ ಸಾವು

ಮೈಸೂರು: ರೈಲಿಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕ ಸಾವು

0

ಮೈಸೂರು: ನಂಜನಗೂಡಿನ ಕವಲಂದೆ ಬಳಿ ಮಂಗಳವಾರ ಮುಂಜಾನೆ ರೈಲಿಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ರೈಲ್ವೆ ಪೊಲೀಸರ ಪ್ರಕಾರ, ಮೃತರನ್ನು ಬಿಹಾರ ಮೂಲದ ಮನು ಕುಮಾರ್ (27) ಎಂದು ಗುರುತಿಸಲಾಗಿದ್ದು, ಬೆಳಗ್ಗೆ 8 ಗಂಟೆ ಸುಮಾರಿಗೆ ಚಾಮರಾಜನಗರದಿಂದ ಬರುತ್ತಿದ್ದ ರೈಲಿಗೆ ಸಿಲುಕಿ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.

ದುರಂತ ಸಂಭವಿಸಿದಾಗ ಮನು ವೀಡಿಯೊ ಕಾಲ್​ ನಲ್ಲಿದ್ದ. ತನ್ನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತ ರೈಲ್ವೆ ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಗು ನಂಜನಗೂಡಿನಲ್ಲಿ ಬಡಗಿಗಳಿಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಮೃತದೇಹವನ್ನು ಎಂಎಂಸಿಆರ್‌ ಐ ಶವಾಗಾರಕ್ಕೆ ರವಾನಿಸಲಾಗಿದೆ.

ಹಿಂದಿನ ಲೇಖನಬೆಂಗಳೂರಿನ ಹೌಸಿಂಗ್ ಸೊಸೈಟಿಯಲ್ಲಿ ನೀರು ದುರ್ಬಳಕೆ ತಡೆಯಲು ಭದ್ರತಾ ಸಿಬ್ಬಂದಿ ನೇಮಕ: 5000 ರೂ. ದಂಡ
ಮುಂದಿನ ಲೇಖನನಿಂತಿದ್ದ ಟ್ರಕ್ ​ಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು