ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
SSLC- PUC ಪಾಸಾದವರಿಗೆ ಉದ್ಯೋಗವಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು: ಸರಗಳ್ಳತನ, ಮನೆಗಳ್ಳತನ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 15.50 ಲಕ್ಷ ರೂ ಮೌಲ್ಯದ 312 ಗ್ರಾಂ ಚಿನ್ನಾಭರಣ, 868 ಗ್ರಾಂ ಬೆಳ್ಳಿಯ ಆಭರಣ, 3 ವಾಚ್ ಹಾಗೂ ಒಂದು ಕ್ಯಾಮರಾ ವಶಪಡಿಸಿಕೊಂಡಿದ್ದಾರೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ, ವಿದ್ಯಾರಣ್ಯಪುರಂ ಠಾಣೆಯ 2 ಸರಗಳ್ಳತನ, ಕುವೆಂಪು ನಗರ, ಉದಯಗಿರಿ ಪೊಲೀಸ್ ಠಾಣೆಗಳ ತಲಾ ಒಂದೊಂದು ಸರಗಳ್ಳತನ ಪ್ರಕರಣಗಳು, ಸರಸ್ವತಿಪುರಂ, ನಜರ್ ಬಾದ್, ಆಲನಹಳ್ಳಿ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಠಾಣೆಯಲ್ಲಿ ತಲಾ ಒಂದೊಂದು ಕಳವು ಪ್ರಕರಣ, ನಜರ್ಬಾದ್ ಠಾಣೆಯಲ್ಲಿ ಒಂದು ಮನೆಗಳ್ಳತನ ಪ್ರಕರಣ, ನಜರ್’ಬಾದ್ ಮತ್ತು ವಿಜಯನಗರ ಠಾಣೆಯಲ್ಲಿ ತಲಾ ಒಂದೊಂದು ಸಾಮಾನ್ಯ ಕಳವು ಪ್ರಕರಣಗಳು ಪತ್ತೆಯಾಗಿದೆ.
ವಿಶೇಷ ಪೊಲೀಸ್ ತಂಡವು ಮತ್ತೊಬ್ಬ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮಂಡಿ ಠಾಣೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 1.50 ಲಕ್ಷ ರೂ. ಬೆಲೆ ಬಾಳುವ 30 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ 4ನೇ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಜಯಲಕ್ಷ್ಮೀಪುರಂ ಠಾಣೆಯ ವ್ಯಾಪ್ತಿಯ ಕಳವು ಪ್ರಕರಣ ಹಾಗೂ ಹಾಸನ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕಳವು ಪ್ರಕರಣಗಳಗೆ ಸಂಬಂಧಿಸಿದಂತೆ 2.40 ಲಕ್ಷ ರೂ. ಮೌಲ್ಯದ 38 ಗ್ರಾಂ ಚಿನ್ನಾಭರಣ ಮತ್ತು ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರಿಂದ ಒಟ್ಟು 20.40 ಲಕ್ಷ ರೂ. ಮೌಲ್ಯದ 380 ಗ್ರಾಂ ತೂಕದ ಚಿನ್ನದ ಆಭರಣ, 868 ಗ್ರಾಂ ತೂಕದ ಬೆಳ್ಳಿಯ ಆಭರಣ ಹಾಗೂ ಒಂದು ಕಾರು ಮತ್ತು ಕ್ಯಾಮರಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.