ಮನೆ ಸ್ಥಳೀಯ ಮೈಸೂರು: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮೈಸೂರು: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

0

ಮೈಸೂರು: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೈಸೂರಿನ ಟಿ ನರಸೀಪುರ ಪೊಲೀಸರು ಬಂಧಿಸಿದ್ದಾರೆ.

ಟಿ.ನರಸೀಪುರ ತಾಲೂಕಿನ ರಂಗನಾಥಪುರ ಗ್ರಾಮದ ವಿನಯ್(೨೦), ಪ್ರದೀಪ್(೨೧) ಬಂಧತ ಆರೋಪಿಗಳಾಗಿದ್ದು, ಇವರಿಂದ ೧೦ ಲಕ್ಷ ಮೌಲ್ಯದ ೧೬ ದ್ವಿಚಕ್ರ ವಾಹನಗಳ ವಶಕ್ಕೆ ಪಡೆದುಕೊಂಡಿದ್ದಾರೆ.

ಬನ್ನೂರು, ಕಿರುಗಾವಲು, ಸಂತೆಮರಳ್ಳಿ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಟಿ ನರಸೀಪುರ ತಾಲ್ಲೂಕಿನ ರಂಗನಾಥಪುರ ಗ್ರಾಮದ ವಿನಯ್ ೨೦ ಪ್ರದೀಪ್ (೨೧) ಬಂಧಿತ ಆರೋಪಿಗಳು ಬನ್ನೂರು,ಕಿರುಗಾವಲು, ಸಂತೆಮರಳ್ಳಿ ವ್ಯಾಪ್ತಿಯಲ್ಲಿ ೧೬ಕ್ಕೂ ಹೆಚ್ಚು ಬೈಕ್ ಗಳನ್ನ ಕಳ್ಳತನ ಮಾಡಿದ್ದರು. ಇದರಿಂದ ಜನ ರೋಸಿ ಹೋಗಿದ್ದರು. ಅಲ್ಲದೇ ಇದು ಪೊಲೀಸರ ದೊಡ್ಡ ತಲೆನೋವಾಗಿತ್ತು.

ಕೊನೆಗೆ ಕಳ್ಳರ ಪತ್ತೆಗಾಗಿ ನಂಜನಗೂಡು ಡಿವೈಎಸ್ ಪಿ ಗೋವಿಂದರಾಜು, ಟಿನರಸೀಪುರ ಠಾಣೆ ಪೋಲೀಸ್ ಇನ್ಸಪೆಕ್ಟರ್ ಜೆ.ಎನ್.ಆನಂದ್ ಕುಮಾರ್ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆಗಿಳಿದು ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಹಿಂದಿನ ಲೇಖನಸರ್ವಪಕ್ಷ ಸಭೆ: ರಾಜ್ಯದ ಹಿತರಕ್ಷಣೆ ವಿಷಯದಲ್ಲಿ ರಾಜಿ ಇಲ್ಲವೆಂದ ಡಿ.ಕೆ ಶಿವಕುಮಾರ್
ಮುಂದಿನ ಲೇಖನಮಂಗಳೂರು: ಅಕ್ರಮವಾಗಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ