ಮನೆ ಅಪರಾಧ ಮೈಸೂರು ಬಂದ್:  ಬಸ್, ಹೋಟೆಲ್ ಗಳ ಮೇಲೆ ಕಲ್ಲು ತೂರಾಟ

ಮೈಸೂರು ಬಂದ್:  ಬಸ್, ಹೋಟೆಲ್ ಗಳ ಮೇಲೆ ಕಲ್ಲು ತೂರಾಟ

0

ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದ ದಿನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆದ ಪ್ರಕರಣ ಖಂಡಿಸಿ, ಸಂವಿಧಾನ ರಕ್ಷಣಾ ಸಮಿತಿ ಸೋಮವಾರ ಕರೆ ನೀಡಿದ್ದ ‘ಮೈಸೂರು ಬಂದ್‌’ ಪ್ರತಿಭಟನಾ ವೇಳೆ ಪ್ರತಿಭಟನಕಾರರು ಬಸ್‌ಗಳು ಹಾಗೂ ಹೋಟೆಲ್‌ಗಳ ಮೇಲೆ ಕಲ್ಲು ತೂರಿದ್ದಾರೆ.

ಕೆಎಸ್‌ಆರ್‌ಟಿಸಿ ನಗರ ಬಸ್‌ನಿಲ್ದಾಣದ ಒಳಗೆ ನಿಂತಿದ್ದ ಬಸ್‌ವೊಂದರ ಮೇಲೆ ಕಲ್ಲು ತೂರಿದ್ದರಿಂದ ಮುಂಭಾಗದ ಗಾಜು ಪುಡಿಯಾಗಿದೆ. ಪುರಭವನದ ಮುಂಭಾಗವೂ ಬಸ್‌ವೊಂದರ ಮೇಲೂ ಕಲ್ಲು ತೂರಲಾಗಿದೆ.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಪ್ರತಿಕ್ರಿಯಿಸಿ, ಸಯ್ಯಾಜಿರಾವ್ ರಸ್ತೆ, ಅಗ್ರಹಾರ, ಶಿವರಾಮಪೇಟೆ ಸೇರಿದಂತೆ ಹಲವೆಡೆ ಬಾಗಿಲು ತೆರೆದಿದ್ದ ಹೋಟೆಲ್‌ಗಳನ್ನು ಬಲವಂತವಾಗಿ ಮುಚ್ಚಿಸಲಾಗಿದೆ. 4 ಹೋಟೆಲ್‌ಗಳ ಮೇಲೆ ಕಲ್ಲು ತೂರಲಾಗಿದೆ ಎಂದು ತಿಳಿಸಿದರು.

ಹಿಂದಿನ ಲೇಖನಕಾನೂನು ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಮುಂದಿನ ಲೇಖನಔಷಧೀಯ ವಲಯದಲ್ಲಿ ಕೃತಕ ಬುದ್ದಿಮತ್ತೆ ಅನಿವಾರ್ಯ: ಪ್ರೊ.ಜಿ.ಹೇಮಂತ್ ಕುಮಾರ್