ಮತದಾರನಿಗೆ YSR ಕಾಂಗ್ರೆಸ್ ಶಾಸಕನಿಂದ ಕಪಾಳ ಮೋಕ್ಷ…
ಮೋದಿ ಇಂದು ಪಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ರು
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ದೇವೇಗೌಡರು ಜೆಡಿಎಸ್ ಶಾಸಕ ಎ.ಮಂಜು ಹೇಳಿಕೆ.
HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ ? ಹಾಗಿದ್ರೆ ದಂಡ ಬೀಳೋದು ಖಚಿತ…!
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ನಗರದ ನಜರ್’ಬಾದ್ ಪೊಲೀಸ್ ಠಾಣೆಯಿಂದ ಮೈಮುಲ್ ಡೈರಿವರೆಗೆ 1.50 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ದುರಸ್ತಿ ಕಾಮಗಾರಿಗೆ ಬಸವೇಶ್ವರ ಹಾಗೂ ಮಹದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮೇಯರ್ ಶಿವಕುಮಾರ್ ಗುರುವಾರ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಮೇಯರ್, ಈ ರಸ್ತೆಯು ಬಹಳ ಹಾಳಾಗಿದ್ದು ದುರಸ್ತಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದರು. ಮೂರು ತಿಂಗಳ ಹಿಂದೆಯೇ ಕಾಮಗಾರಿ ಆರಂಭಿಸಲು ಕರೆದಿದ್ದ ಟೆಂಡರ್ನಲ್ಲಿ ಒಬ್ಬರು ಮಾತ್ರ ಪಾಲ್ಗೊಂಡಿದ್ದರು. ಮತ್ತೆ ಟೆಂಡರ್ ಪ್ರಕ್ರಿಯೆ ನಡೆಸಿದ್ದರಿಂದ ವಿಳಂಬವಾಯಿತು ಎಂದರು.
ಇಲ್ಲಿ ಡಾಂಬರೀಕರಣ ಕಾಮಗಾರಿ ನಡೆಯಲಿದೆ. ಪ್ರಮುಖ ರಸ್ತೆಗಳಲ್ಲಿ ಇದೂ ಒಂದಾಗಿರುವ ಕಾರಣದಿಂದಾಗಿ ಆದ್ಯತೆ ನೀಡಲಾಗಿದೆ. 2–3 ವರ್ಷಗಳು ಬಾಳಿಕೆ ಬರುವಂತಹ ಗುಣಮಟ್ಟ ಕಾಪಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ನಗರಪಾಲಿಕೆ ಸದಸ್ಯರಾದ ಸತ್ಯರಾಜ್, ಛಾಯಾದೇವಿ ಇದ್ದರು.
ಪರಿಶೀಲನೆ: ಸಿದ್ದಾರ್ಥನಗರ, ಡಾ.ರಾಜ್ಕುಮಾರ್ ರಸ್ತೆಯಲ್ಲಿ ನಡೆಯುತ್ತಿರುವ ಟ್ಯಾಂಕ್, ರಸ್ತೆ, ಚರಂಡಿ, ಯುಜಿಡಿ ಪೈಪ್’ಲೈನ್ ಅಳವಡಿಕೆ ಕಾಮಗಾರಿಗಳನ್ನು ಮೇಯರ್ ಪರಿಶೀಲಿಸಿದರು.
ಉಪ ಮೇಯರ್ ಡಾ.ಜಿ.ರೂಪಾ, ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಎಸ್’ಇ ಮಹೇಶ್, ಎಇ ರಂಜಿತ್ ಕುಮಾರ್, ವಾಣಿವಿಲಾಸ ನೀರು ಸರಬರಾಜು ಮಂಡಳಿ ಎಇ ಸುವರ್ಣಾ ಇದ್ದರು.