ಮನೆ ಅಪರಾಧ ಮೈಸೂರು: ಅವ್ವ ಮಾದೇಶ್ ಆಪ್ತ ಚಂದ್ರು ಬರ್ಬರ ಕೊಲೆ

ಮೈಸೂರು: ಅವ್ವ ಮಾದೇಶ್ ಆಪ್ತ ಚಂದ್ರು ಬರ್ಬರ ಕೊಲೆ

0

ಮೈಸೂರು: ವಿಧಾನಸಭೆಯ ಚುನಾವಣೆ ಮುಗಿಯುತ್ತಿದ್ದಂತೆ ನಗರದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಪ್ರಾರಂಭವಾಗಿದೆ. ಅದಕ್ಕೆ ಪುಷ್ಟಿ ನೀಡಿದಂತೆ ಇಂದು ಕೆಲ ದಿನಗಳ ಹಿಂದಷ್ಟೇ ಕೇಸ್ ಖುಲಾಸೆಯಾಗಿ ಹೊರ ಬಂದಿದ್ದ ಚಂದ್ರು ಅಲಿಯಾಸ್ ಚಂದ್ರಶೇಖರ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Join Our Whatsapp Group

ಹಳೇ ವೈಷಮ್ಯದ ಹಿನ್ನೆಲೆ ಕೆಲ ದಿನಗಳ ಹಿಂದೆಯಷ್ಟೆ ಜೈಲಿನಿಂದ ಬಿಡುಗಡೆ ಆಗಿ ಬಂದಿದ್ದ ಅವ್ವ ಮಾದೇಶ್ ಆಪ್ತ ಚಂದು ಅಲಿಯಾಸ್ ಚಂದ್ರಶೇಖರ್ ಎಂಬಾತನ ಮೇಲೆ ದ್ವಿ ಚಕ್ರ ವಾಹನಗಳಲ್ಲಿ ಬಂದ ಆರು ಜನ ದುಷ್ಕರ್ಮಿಗಳು ಮಚ್ಚು ಮತ್ತು ಲಾಂಗುಗಳಿಂದ ನಡುರಸ್ತೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ನಗರದ ಒಂಟಿಕೊಪ್ಪಲ್ ಮುಖ್ಯರಸ್ತೆ 2ನೇ ಕ್ರಾಸ್ ಬಳಿ `ಮೂನ್ ಡ್ರೆಸ್ ವೇರ್ಸ್’ ಟೈಲರ್ ಅಂಗಡಿ ಮುಂಭಾಗ ಸಂಜೆ ಸುಮಾರು 5 ಗಂಟೆಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.

ಹಳೇ ವೈಷಮ್ಯವೇ ಕಾರಣ ?:

ಜೈಲಿನಿಂದ ಬಿಡುಗಡೆಯಾಗಿ ಬಂದ ಚಂದು ಅಲಿಯಾಸ್ ಚಂದ್ರಶೇಖರ್ ಎಂಬಾತನ ಕೊಲೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗುತ್ತಿದೆ. ಈ ಹಿಂದೆ ಕೊಲೆಯಾದ ಪಡುವಾರಹಳ್ಳಿಯ ದೇವು ಎಂಬಾತನ ಕೊಲೆಗೆ ಪ್ರತೀಕಾರವಾಗಿ ಈ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆಯಾದ ಚಂದು ಅಲಿಯಾಸ್ ಚಂದ್ರಶೇಖರ್ ಈತ ಮಾಜಿ ನಗರ ಪಾಲಿಕೆ ಸದಸ್ಯ ಅವ್ವ ಮಾದೇಶ್ ಅಪ್ತನಾಗಿದ್ದು, ಈ ಹಿಂದೆ ಈತ ಹುಣಸೂರಿನಲ್ಲಿ ನಡೆದ ಜೋಡಿ ಕೊಲೆಯಲ್ಲಿ ಆರೋಪಿ ಸಹ ಆಗಿದ್ದ ಎನ್ನಲಾಗಿದೆ.

ಕೊಲೆಯಾದ ಸ್ಥಳಕ್ಕೆ ನಗರ ಪೋಲಿಸ್ ಕಮಿಷನರ್ ರಮೇಶ್ ಬಾನೋತ್ ಹಾಗೂ ವಿ ವಿ.ಪುರಂ ಠಾಣೆಯ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.