ಮನೆ ರಾಜಕೀಯ ಮೈಸೂರು ಅಭಿವೃದ್ಧಿ ಯೋಜನೆಗಳ ಚರ್ಚೆ: ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಡೇಟ್ ಫಿಕ್ಸ್ ಮಾಡಿದ ಎಂ. ಲಕ್ಷ್ಮಣ್

ಮೈಸೂರು ಅಭಿವೃದ್ಧಿ ಯೋಜನೆಗಳ ಚರ್ಚೆ: ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಡೇಟ್ ಫಿಕ್ಸ್ ಮಾಡಿದ ಎಂ. ಲಕ್ಷ್ಮಣ್

0

ಮೈಸೂರು(Mysuru): ಮೈಸೂರು ಅಭಿವೃದ್ಧಿ ಯೋಜನೆಗಳ  ಬಗ್ಗೆ ಚರ್ಚೆಗೆ ಸಂಸದ ಪ್ರತಾಪ್ ಸಿಂಹ ನೀಡಿದ್ಧ ಪಂಥಾಹ್ವಾನ ಸ್ವೀಕರಿಸಿದ್ದು, ಜೂ. 29 ರಂದು ಮಧ್ಯಾಹ್ನ 12 ಗಂಟೆಗೆ ಸಂಸದರ ಕಚೇರಿಯಲ್ಲಿ ಚರ್ಚೆಗೆ ಸಿದ್ದ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾಗಿ ದಾಖಲೆ ಸಮೇತ ಸಂಸದರ ಜಲದರ್ಶಿನಿಯ ಕಚೇರಿ ಬಳಿ ಹಾಜರಾಗುವೆ. ಎರಡನೇ ಬಾರಿಗೆ ಆಹ್ವಾನ ನೀಡುತ್ತಿದ್ದೂ ಈ ಬಾರಿ ಪಲಾಯನ ಮಾಡಬೇಡಿ. ಜನರಿಗೆ ಸತ್ಯ ಹೇಳಲು ಯಾರಾದರೇನು.? ಚರ್ಚೆಗೆ ಬನ್ನಿ  ಎಂದು ಸವಾಲು ಹಾಕಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 10  ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.

ರಿಯಲ್ ಎಸ್ಟೇಟ್ ವ್ಯವಹಾರಕ್ಕಾಗಿ ಮೈಸೂರಿಗೆ ಆಗಮಿಸುವ ಉಸ್ತುವಾರಿ ಸಚಿವರು

ಬಿಜೆಪಿ ಸ್ಥಳೀಯ ಮುಖಂಡರ ಜೊತೆ ಸೇರಿಕೊಂಡು ಉಸ್ತುವಾರಿ ಸಚಿವ ಎಸ್. ಟಿ ಸೋಮಶೇಖರ್ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದಾರೆ. ಅವರು ಮೈಸೂರಿಗೆ ಬರುತ್ತಿರುವುದು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸಲುವಾಗಿ. ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿ ಸೋಲು ಕಂಡಿದೆ. ಹಾಗಾಗಿ ಅವರನ್ನೇ ಮುಂದುವರಿಸಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಿದರು.

ಮೋದಿ ಹೆಸರಿಲ್ಲದೇ ಪ್ರತಾಪ್ ಸಿಂಹ ಗ್ರಾಪಂ ಸದಸ್ಯನಾಗಲು ಸಾಧ್ಯವಿಲ್ಲ:

ಗ್ರಾಮ  ಪಂಚಾಯತ್ ನಲ್ಲೂ ಗೆಲ್ಲದ ವ್ಯಕ್ತಿ ಮುಂದೆ ಚರ್ಚೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ,  ಗ್ರಾಮ ಪಂಚಾಯತ್ ನಲ್ಲಿ ಪಕ್ಷದ ಚಿಹ್ನೆ ಇಲ್ಲದೆ ಇಬ್ಬರು ಸ್ಪರ್ಧಿಸೋಣ. ವೈಯಕ್ತಿಕ ವರ್ಚಸ್ಸಿನಿಂದ ಗ್ರಾಪಂ ನಿಂದ ಆಯ್ಕೆಯಾಗಿ ಸಾಬೀತು ಪಡಿಸುತ್ತೇನೆ. ಮೋದಿ ಹೆಸರಿಲ್ಲದೆ ನೀವು ಗ್ರಾಪಂ ಸದಸ್ಯನಾಗಲೂ ಸಾಧ್ಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಗೆ ನೀವು ಎಲ್ಲಿರುತ್ತಿರಿ  ಗೊತ್ತಾಗಲಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷದ ಭಾರತ್ ಜೋಡೊ ಅಭಿಯಾನದಿಂದ ಬಿಜೆಪಿ ವಿಚಲಿತವಾಗಿದೆ. ಭಾರತ್ ಜೋಡೊ ಅಭಿಯಾನವನ್ನು ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಆರು ತಿಂಗಳ ಕಾಲ ನಡೆಸಲಿದೆ. ಇದರಿಂದ ಬಿಜೆಪಿ ಆತಂಕಕ್ಕೊಳಗಾಗಿದೆ‌. ಇದೇ ಕಾರಣದಿಂದ ಕಾಂಗ್ರೆಸ್ ನ ಹಿರಿಯ ನಾಯಕರಿಗೆ ಇಡಿ ದಾಳಿ, ವಿಚಾರಣೆ ಮುಖಾಂತರ ತೊಂದರೆ ಕೊಡುತ್ತಿದೆ ಎಂದರು.

ಮೈಸೂರಿನಲ್ಲಿ ಮೋದಿ ಪಿಕ್ನಿಕ್ :

ಪ್ರಧಾನಿ ಮೋದಿ ಅವರ ರಾಜ್ಯ ಪ್ರವಾಸದ ಬಗ್ಗೆ ಟೀಕಿಸಿದ ಎಂ. ಲಕ್ಷ್ಮಣ್,  ಮೈಸೂರಿನಲ್ಲಿ ಪಿಕ್ನಿಕ್ ಮುಗಿಸಿ ಹೊರಟ ಮೋದಿ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ್ದಾರೆ. ಮೈಸೂರಿನಲ್ಲಿ 19 ಕೋಟಿ, ಬೆಂಗಳೂರಿನಲ್ಲಿ 34ಕೋಟಿ ಮೋದಿಗಾಗಿ ಆದ ಖರ್ಚು.ಬಂದು ಹೋದ ಮೋದಿಯಿಂದ ರಾಜ್ಯಕ್ಕೆ ಏನು ಕೊಡುಗೆ ಇಲ್ಲ. 20 ನಿಮಿಷ ಯೋಗ ಮಾಡಿ ಪ್ರಚಾರ ಮಾಡಿಕೊಂಡು ಹೋದರು. ಈ ಬಾರಿ ಮೈಸೂರಿನಲ್ಲಿ ಚುನಾವಣೆ ಇಲ್ಲದಿದ್ದರಿಂದ ಯಾವು ಅನುದಾನವನ್ನು ನೀಡಲಿಲ್ಲ.ಒಟ್ಟಾರೆ ರಾಜ್ಯದಲ್ಲಿ ಮೋದಿ ಪಿಕ್ನಿಕ್ ಮುಗಿಸಿ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.

ಹಿಂದಿನ ಲೇಖನಶಾಸಕರ ಕುಟುಂಬಕ್ಕೆ ನೀಡಿದ ಭದ್ರತೆ ಹಿಂಪಡೆದ ಸರ್ಕಾರ: ಏಕನಾಥ ಶಿಂಧೆ ಕೆಂಡ
ಮುಂದಿನ ಲೇಖನ75ನೇ  ಸ್ವಾತಂತ್ರ್ಯೋತ್ಸವದ  ಸಂದರ್ಭದಲ್ಲಿ ಮೈಸೂರು, ಕರ್ನಾಟಕದ ಪಾತ್ರ ಬಹಳ ದೊಡ್ಡದು: ರಾಮದಾಸ್