ಮೈಸೂರು: ಕಾಂಗ್ರೆಸ್ ನ 200 ಯುನಿಟ್ ಉಚಿತ ವಿದ್ಯುತ್ ಮತ್ತು ಗೃಹಿಣಿ 2000 ರೂ ಗ್ಯಾರೆಂಟಿ ಯೋಜನೆ ಘೋಷಣೆ ಹಿನ್ನೆಲೆಯಲ್ಲಿ ಇಂದು ಕೆ ಆರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನವೀನ್ ಕುಮಾರ್ ಅವರ ನೇತೃತ್ವದಲ್ಲಿ, ವಾರ್ಡ್ ನಂಬರ್ ೬೪ ಅರವಿಂದ ನಗರ ಭಾಗದಲ್ಲಿ ಜನರಿಗೆ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಲಾಯಿತು.
ಕಾಂಗ್ರೆಸ್ ನಗರಾಧ್ಯಕ್ಷ ಮೂರ್ತಿ ಕಾರ್ಡ್ ಗಳನ್ನು ನೀಡುವ ಮೂಲಕ ಚಾಲನೆ ನೀಡಿದರು.
ಕೆಲವು ದಿನಗಳ ಹಿಂದೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದರು.
ಇದೆ ಸಂಧರ್ಭದಲ್ಲಿ ಮಾತನಾಡಿದ ನವೀನ್ ಕುಮಾರ್, ಕಾಂಗ್ರೆಸ್ ಸರ್ಕಾರ ಜನರಿಗೆ ಹಲವು ಯೋಜನೆಗಳನ್ನು ನೀಡಿದೆ. ಮುಂಬರುವ ದಿನದಲ್ಲಿ ಕಾಂಗ್ರೆಸ್ ನ 200 ಯುನಿಟ್ ಉಚಿತ ವಿದ್ಯುತ್ ಮತ್ತು ಗೃಹಿಣಿ 2000 ರೂ ಗ್ಯಾರೆಂಟಿ ಯೋಜನೆ ಘೋಷಣೆ ಹಿನ್ನೆಲೆಯಲ್ಲಿ ಪ್ರತಿ ವಾರ್ಡ್ ನ ಜನರಿಗೆ ಗ್ಯಾರಂಟಿ ಕಾರ್ಡ್ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಹಾಗೆಯೇ ನಮ್ಮ ಆಶ್ವಾಸನೆಯಂತೆ ಭರವಸೆಯನ್ನು ಈಡೇರಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ನಗರ ಕಾಂಗ್ರೆಸಿನ ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಶಿವಣ್ಣ, ಮೈಸೂರು ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಶೀಲ ಕೇಶವಮೂರ್ತಿ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಲತಾ ಮೋಹನ್, 65ನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಮುಖಂಡ ಮೊಗಣ್ಣಾಚಾರ್, ಕಾಂಗ್ರೆಸ್ ಮುಖಂಡರಾದ ರಾಜೇಶ್ ಎಂ, ಪ್ರವೀಣ್ ಕುಮಾರ್, ವಿಜ್ಞೇಶ್, ಆನಂದ್, ಶ್ರೀನಿವಾಸ್, ಕುಮಾರ್, ಭರತ್, ಪ್ರಶಾಂತ್, ವಸಂತ ಸಾವಂತಿ, ಜ್ಯೋತಿ ಹಾಗೂ ಇತರ ಮುಖಂಡರು ಭಾಗವಹಿಸಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.