ಮನೆ ಸ್ಥಳೀಯ ಮೈಸೂರು: ಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಮೈಸೂರು: ಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

0

ಮೈಸೂರು: ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು ಇಂದು ನಂಜನಗೂಡು ತಾಲೂಕಿನ ಕೆಂಪ ಸಿದ್ದನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಕಂದಾಯ ಗ್ರಾಮ ರಚನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಗ್ರಾಮದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮಾಡಿದರು.

ಈ ವೇಳೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ನೀಡುವ ವಿವಿಧ ಕೃಷಿ ಸಲಕರಣೆಗಳ ವಿತರಣೆ ಕುರಿತು ಮಾಹಿತಿ ಪಡೆದರು ಹಾಗೂ ಅಟಲ್ ಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮೈಸೂರು ಉಪವಿಭಾಗಾಧಿಕಾರಿಗಳಾದ ರಕ್ಷಿತ್, ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್,ಡಿಡಿ ಎಲ್ ಆರ್ ರಮ್ಯಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • ಟ್ಯಾಗ್ಗಳು
  • Mysore
ಹಿಂದಿನ ಲೇಖನಬಳ್ಳಾರಿ: ಹಾಡಹಗಲೇ ಪುರಸಭಾ ಸದಸ್ಯನ ಮೇಲೆ ಹಲ್ಲೆ
ಮುಂದಿನ ಲೇಖನಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲ: ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ