ಮೈಸೂರು: ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಇನ್ನು 6 ದಿನ ಮಾತ್ರ ಬಾಕಿ ಇದ್ದು, ಈ ಮಧ್ಯೆ ಅರಮನೆಯಲ್ಲಿ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು, ಇಂದು ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ನೆರವೇರಿತು.
ಬೆಳಗ್ಗೆ 7.15ಕ್ಕೆ ನವಗ್ರಹ ಹೋಮ ಮತ್ತು ಇತರೆ ಶಾಂತಿ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ 10.05 ರಿಂದ 10.35ರವರೆಗೆ ಅಂಬಾವಿಲಾಸ ದರ್ಬಾರ್ ಹಾಲ್ ನಲ್ಲಿ ಸಿಂಹಾಸನ ಜೋಡಣೆ ಕಾರ್ಯ ಮಾಡಲಾಯಿತು. ಬೆಳಗ್ಗೆ 11ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು, ಅಶ್ವವನ್ನು ಗೋಶಾಲೆಗೆ ಕರೆತಂದು ಪೂಜೆ ಸಲ್ಲಿಕೆ ಮಾಡಲಾಯಿತು.
ಖಜಾನೆಯಲ್ಲಿದ್ದ ಮುತ್ತು, ರತ್ನ, ಪಚ್ಚೆಯನ್ನ ಸಿಂಹಾಸನ ಒಳಗೊಂಡಿದ್ದು, ಸಿಂಹಾಸನದ ಬಿಡಿ ಭಾಗಗಳು ದರ್ಬಾರ್ ಹಾಲ್ ಗೆ ತಂದು ಆಸನ, ಮೆಟ್ಟಿಲು, ಛತ್ರಿ ಮುಂತಾದ ಬಿಡಿ ಭಾಗಗಳನ್ನು ಜೋಡಣೆ ಮಾಡಲಾಯಿತು.
ನವರಾತ್ರಿಯ ಮೊದಲ ದಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಇನ್ನು ಸಿಂಹಾಸನ ಜೋಡಣೆ ಹಿನ್ನೆಲೆ ಮೈಸೂರು ಅರಮನೆಗೆ ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ನಿರ್ಬಂಧ ವಿಧಿಸಲಾಗಿತ್ತು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.