ಮೈಸೂರು(Mysuru): ಸಾತಗಳ್ಳಿ ಮತ್ತು ದೇವನೂರು ಗ್ರಾಮಗಳಲ್ಲಿನ ಖಾಸಗಿಯವರು ಅಭಿವೃದ್ಧಿಪಡಿಸಿದ್ದ 4 ಅನಧಿಕೃತ ಬಡಾವಣೆಗಳನ್ನು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದಿಂದ ಶನಿವಾರ ತೆರವುಗೊಳಿಸಲಾಯಿತು.
ಸಾತಗಳ್ಳಿಯ ಸರ್ವೇ ನಂ.65, 27/3, 2/3 ಹಾಗೂ ದೇವನೂರು ಗ್ರಾಮದ ಸರ್ವೇ ನಂ.25ರಲ್ಲಿ ಭೂ ಪರಿವರ್ತನೆಯಾಗದೆ ಮತ್ತು ಪ್ರಾಧಿಕಾರದಿಂದ ಅನುಮೋದಿತ ನಕ್ಷೆ ಪಡೆಯದೆ ರಚಿಸಿದ್ದ ಬಡಾವಣೆಗಳಲ್ಲಿ ಕಾರ್ಯಾಚರಣೆ ನಡೆದಿದೆ.
ಆಯುಕ್ತ ಜಿ.ಟಿ.ದಿನೇಶ್ಕುಮಾರ್ ನೇತೃತ್ವದಲ್ಲಿ ತೆರವುಕಾರ್ಯ ನಡೆದಿದ್ದು, ಸಾತಗಳ್ಳಿ ಗ್ರಾಮದಲ್ಲಿ ಗ್ರಾಮದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ ಒತ್ತುವರಿಯನ್ನು ಕೂಡ ತೆರವುಗೊಳಸಲಾಯಿತು.
ಪ್ರಾಧಿಕಾರದ ಕಾರ್ಯದರ್ಶಿ ಡಾ.ಎನ್.ಸಿ.ವೆಂಕಟರಾಜು ಹಾಗೂ ಕಾರ್ಯಪಾಲಕ ಎಂಜಿನಿಯರ್ಗಳಾದ ಮೋಹನ್, ಸುನೀಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭ ಮಾತನಾಡಿದ ಆಯುಕ್ತ ಜಿ.ಟಿ.ದಿನೇಶ್ಕುಮಾರ್, ಸಾರ್ವಜನಿಕರು, ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗೆ ನಿವೇಶನ ಖರೀದಿಸುವ ಮುನ್ನ ಬಡಾವಣೆಯು ‘ಮುಡಾ’ದಿಂದ ಅನುಮೋದನೆ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಹಾಗೂ ಅನಧಿಕೃತ ಬಡಾವಣೆಗಳ ಬಗ್ಗೆ ತಿಳಿದಲ್ಲಿ ಪ್ರಾಧಿಕಾರದ ಗಮನಕ್ಕೆ ತರಬೇಕು. ಅಂತಹ ಅನಧಿಕೃತ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ಧ್ವಂಸಗೊಳಿಸಿ ತೆರವುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.