ಮೈಸೂರು(Mysuru): ನಗರದ ಇಟ್ಟಿಗೆಗೂಡಿನ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಎದುರಿಗಿರುವ ಕೆಇಬಿ ಕಂಬದಿಂದ ವಿದ್ಯುತ್ ವೈರ್ ಗಳು ಹೊರಚಾಚಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ.
ಈ ರಸ್ತೆಯಲ್ಲಿ ಹೆಸರಾಂತ ಪ್ರವಾಸಿ ತಾಣ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಪ್ಲಾನೆಟ್ ಅರ್ಥ್ ಅಕ್ವೇರಿಯಂ ಇದ್ದು, ಪ್ರವಾಸಿಗರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಓಡಾಡುತ್ತಲೇ ಇರುತ್ತಾರೆ. ಇತ್ತೀಚಿಗೆ ಅಕಾಲಿಕ ಮಳೆಯಾಗುತ್ತಿದ್ದು, ಕೆಇಬಿ ಕಂಬದಿಂದ ಹೊರಚಾಚಿರುವ ವಿದ್ಯುತ್ ವೈರ್ ಗಳಿಂದ ಸಾಕಷ್ಟು ಅನಾಹುತವಾಗುವ ಆತಂಕ ಎದುರಾಗಿದೆ.
ಅಲ್ಲದೇ ಇದೇ ಸ್ಥಳದಲ್ಲಿರುವ ಮರದ ಕೊಂಬೆಯೂ ನೇತಾಡುತ್ತಿದ್ದು, ರಸ್ತೆಯಲ್ಲಿ ಸಂಚರಿಸುವವರ ತಲೆ ಮೇಲೆ ಬೀಳುವಂತಿದೆ. ಇದರಿಂದಾಗಿ ಸಾರ್ವಜನಿಕರು , ವಿದ್ಯಾರ್ಥಿಗಳು ಆತಂಕದಲ್ಲಿಯೇ ಓಡಾಡಬೇಕಿದೆ.
ಹತ್ತಿರದಲ್ಲಿಯೇ ಚಿರಾಗ್ ಹೋಟೆಲ್ ಕೂಡ ಇದ್ದು, ಹೋಟೆಲ್ ಗೆ ಆಗಮಿಸುವ ಗ್ರಾಹಕರು ಹಾಗೂ ಸಿಬ್ಬಂದಿ ಮರದ ಕೆಳಗೆ ವಾಹನ ನಿಲುಗಡೆ ಮಾಡುತ್ತಾರೆ. ಮರದ ಕೊಂಬೆ ಕೆಳಗೆ ಬಿದ್ದರೆ ವಾಹನ ಜಖಂಗೊಳ್ಳುವುದರಲ್ಲಿ ಸಂಶಯವಿಲ್ಲ. ಆದರೆ ಸರ್ಕಾರಿ ಕಚೇರಿ ಎದುರಿನಲ್ಲಿಯೇ ಈ ಸಮಸ್ಯೆಗಳಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಆದ್ದರಿಂದ ಕೂಡಲೇ ಚೆಸ್ಕಾಂ ಸಿಬ್ಬಂದಿ ಕೆಇಬಿ ಕಂಬವನ್ನು ದುರಸ್ತಿಗೊಳಿಸಿ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕು. ಅಂತೆಯೇ ಪಾಲಿಕೆ ಅಧಿಕಾರಿಗಳು ನೇತಾಡುತ್ತಿರುವ ಮರದ ಕೊಂಬೆಯನ್ನು ತೆರವುಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.