ಮನೆ ಅಪರಾಧ ಮೈಸೂರು: ಮಕ್ಕಳಿಲ್ಲವೆಂಬ ಕಾರಣಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ

ಮೈಸೂರು: ಮಕ್ಕಳಿಲ್ಲವೆಂಬ ಕಾರಣಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ

0

ಮೈಸೂರು: ಮಕ್ಕಳಿಲ್ಲವೆಂಬ ಕಾರಣಕ್ಕೆ ಮನನೊಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಜಂಗಲ್ ರೆಸಾರ್ಟ್’ನ ವಸತಿ ಗೃಹದಲ್ಲಿ ನಡೆದಿದೆ.

ಜಂಗಲ್ ರೆಸಾರ್ಟ್’ನಲ್ಲಿ ಶೌಚಾಲಯ ಶುಚಿತ್ವ ಕಾರ್ಯ ‌ನಿರ್ವಹಿಸುತ್ತಿದ್ದ ಧರ್ಮರಾಜು ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವ.

ವಿವಾಹವಾಗಿ 5 ವರ್ಷವಾದ್ರೂ ಮಕ್ಕಳಾಗಿಲ್ಲ ಎಂಬ ವಿಚಾರಕ್ಕೆ ಧರ್ಮರಾಜು ಮತ್ತು ಪತ್ನಿ ನಡುವೆ ಜಗಳ ನಡೆದಿತ್ತು. ಪತ್ನಿ ಜಗಳವಾಡಿಕೊಂಡು ತವರಿಗೆ ತೆರಳಿದ್ದ ವೇಳೆ ಕರ್ತವ್ಯಕ್ಕೆ ರಜೆ ಹಾಕಿದ ಧರ್ಮರಾಜು ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದಾನೆ.

ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಧರ್ಮರಾಜು ಮೃತದೇಹ ರವಾನೆ ಮಾಡಲಾಗಿದ್ದು, ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಕೃಷಿಕರ ಪರವಿಲ್ಲದ ಬಜೆಟ್: ಬಡಗಲಪುರ ನಾಗೇಂದ್ರ
ಮುಂದಿನ ಲೇಖನಶಿವ ಸ್ತೋತ್ರ