ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು: ಸ್ವಗೃಹದಲ್ಲಿಯೇ ಇಂಜಿನಿಯರ್ ಒಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಗರದ ಭೋಗದಿ 2ನೇ ಹಂತದ ಬಳಿ ನಡೆದಿದೆ.
ಬೆಂಗಳೂರಿನ ಕರ್ನಾಟಕ ನವೀಕರಿಸಹುದಾದ ಇಂಧನ ಅಭಿವೃದ್ಧಿ ನಿಯಮಿತದಲ್ಲಿ ಸೋಲಾರ್ ಎನರ್ಜಿ ಇಲಾಖೆಯ ಇಂಜಿನಿಯರ್ ಡಿ ಕೆ ದಿನೇಶ್ ಕುಮಾರ್ (50) ಮೃತ ವ್ಯಕ್ತಿ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಇವರು ಮೈಸೂರಿನಲ್ಲಿ ಕುಟುಂಬದ ಜೊತೆ ನಗರದ ಬೋಗಾದಿ 2ನೇ ಹಂತದ ನಿರ್ಮಿತಿ ಕೇಂದ್ರದ ಬಳಿ ಮನೆ ಮಾಡಿಕೊಂಡು, ಪತ್ನಿ ಮತ್ತು 12 ವರ್ಷದ ಮಗನೊಂದಿಗೆ ವಾಸವಿದ್ದರು.
ಭಾನುವಾರ ರಾತ್ರಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ದಿನೇಶ್ ಕುಮಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ಕೆಲಸಗಾರರು ಸೇರಿಸಿದ್ದರು. ಇದರ ಜೊತೆಗೆ ಮನೆಯಲ್ಲೇ ಇದ್ದ ಪತ್ನಿ ಹಾಗೂ ಪುತ್ರ ಸಹ ಅಸ್ವಸ್ಥಗೊಂಡಿದ್ದು, ಅವರು ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಮಧ್ಯೆ ಆಸ್ಪತ್ರೆಗೆ ಕರೆತರುವ ಹೊತ್ತಿಗೆ ದಿನೇಶ್ ಕುಮಾರ್ ಮೃತಪಟ್ಟಿದ್ದು, ದೇಹ ಉಬ್ಬಿಕೊಂಡ ಸ್ಥಿತಿಯಲ್ಲಿತ್ತು. ಇದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಡಿ ಕೆ ದಿನೇಶ್ ಕುಮಾರ್ ಅವರ ಮೃತದೇಹ ಉಬ್ಬಿಕೊಂಡಿದ್ದು, ಬಾಯಲ್ಲಿ ರಕ್ತ ಬಂದಿದೆ. ದೇಹದ ಕೆಲವು ಭಾಗಗಳಿಗೆ ಗಾಯವಾಗಿದೆ. ಇದರಿಂದ ಇವರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆದ್ದರಿಂದ ತನಿಖೆ ಮಾಡಬೇಕೆಂದು ಮೃತ ದಿನೇಶ್ ಕುಮಾರ್ ಅಕ್ಕನ ಮಗ ನಾರಾಯಣ ಸರಸ್ವತಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಮೃತರ ಪತ್ನಿ, ಮಗ ಹಾಗೂ ಮನೆ ಕೆಲಸಗಾರರ ಮೇಲೆ ಅನುಮಾನ ಇದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.