ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಲೇಖಕ ಮಹೇಶ್ ಚಂದ್ರಗುರು ಭಾಷಣಕ್ಕೆ ಆಕ್ರೋಶ ವ್ಯಕ್ತಪಡಿಸಿ, ಕ್ಷಮೆ ಕೇಳುವಂತೆ ಗಾಣಿಗ ಸಮುದಾಯದ ಮುಖಂಡರು ಪಟ್ಟು ಹಿಡಿದಿರುವ ಘಟನೆ ಎಂಜಿನಿಯರುಗಳ ಸಂಸ್ಥೆಯಲ್ಲಿ ಸೋಮವಾರ ನಡೆದಿದೆ.
‘ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟ’ದ ರಾಜ್ಯ ಪ್ರತಿನಿಧಿಗಳ ಅಧಿವೇಶನದಲ್ಲಿ ಲೇಖಕ ಮಹೇಶ್ ಚಂದ್ರಗುರು ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಸಮಾಜದ ಮುಖಂಡರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಟೀಕೆಗೆ ಆಕ್ಷೇಪ ವ್ಯಕ್ತಪಡಿಸಿದ ಚಾಮರಾಜನಗರದ ಗಾಣಿಗ ಸಮಾಜದ ಮುಖಂಡರಾದ ಜಯರಾಮಶೆಟ್ಟಿ ಹಾಗೂ ಅಂಕಶೆಟ್ಟಿ, ಸಮಾಜದ ಶ್ರೇಯೋಭಿವೃದ್ಧಿ ಬಗ್ಗೆ ಮಾತನಾಡಿ, ‘ರಾಜಕೀಯ ಮಾತನಾಡಬೇಡಿ’ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡುವುದೇಕೆ ಎಂದು ಹರಿಹಾಯ್ದರು.
ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಸಮಾಜದ ಅಭಿವೃದ್ಧಿ ಎಲ್ಲಿ ಆಗಿದೆ. ಈಗ ನೆಹರೂ ಆಡಳಿತ ಬೇಕು ಎಂಬುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಅದಕ್ಕೆ ಉತ್ತರಿಸಿದ ಮಹೇಶ್ ಚಂದ್ರಗುರು, ತಾತ್ವಿಕ ವಿರೋಧವಷ್ಟೇ ಮಾಡಿ? ಗಲಾಟೆ ಮಾಡುವುದೇಕೆ. ಮೋದಿ ಅವರ ಗುಲಾಮರಾ ಎನ್ನುತ್ತಿದ್ದಂತೆ ವೇದಿಕೆಗೆ ಪ್ರವೇಶಿಸಿದ ಮುಖಂಡರು ವಾಗ್ವಾದಕ್ಕಿಳಿದು ಕ್ಷಮೆಗೆ ಆಗ್ರಹಿಸಿದರು.
ಒಕ್ಕೂಟದ ಅಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ಮುಖಂಡರನ್ನು ಸಮಾಧಾನಿಸಿ ಮನವೊಲಿಸಿದರು.
ಮಹೇಶ್ ಚಂದ್ರ ಗುರು ಭಾಷಣದ ವಿಷಯಗಳೇನು?
ಜಾಗತೀಕರಣ ಉಳ್ಳವರಿಗೆ ಮಾತ್ರವೇ ಅನುಕೂಲ ಮಾಡಿಕೊಟ್ಟಿದೆ. ಬ್ಯಾಂಕ್ಗಳು ಸಾಲ ನೀಡುತ್ತಿಲ್ಲ. ಸರ್ಕಾರಕ್ಕೆ ಮತಗಳು ಬೇಕಿದೆಯೇ ಹೊರತು ಅಭಿವೃದ್ಧಿ ಬೇಕಿಲ್ಲ. ಸರ್ಕಾರವನ್ನು ಪುರೋಹಿತಶಾಹಿ ಹಾಗೂ ಬಂಡವಾಳಶಾಹಿಗಳ ನಿಯಂತ್ರಣದಲ್ಲಿದೆ. ಹೀಗಾಗಿಯೇ ಶೂದ್ರರು, ದಲಿತರು ಯಥಾಸ್ಥಿತಿಯಲ್ಲಿಯೇ ಇದ್ದಾರೆ. ಹೀಗಾಗಿಯೇ ಜಾತಿ ವಿನಾಶವಾಗಿಲ್ಲ ಎಂದು ಲೇಖಕ ಮಹೇಶ್ಚಂದ್ರಗುರು ಹೇಳಿದರು.
ಕರ್ಮಯೋಗವನ್ನೇ ನಂಬಿರುವ ಕಾಯಕ ಸಮಾಜ ಕರ್ನಾಟಕದ ಆರ್ಥಿಕತೆಯ ಬೆನ್ನೆಲುಬಾಗಿದೆ. ಅವರ ಕೊಡುಗೆಯನ್ನು ಗುರುತಿಸಿ ಅವರನ್ನು ಮೇಲೆತ್ತಲು ಆಳುವವರಿಗೆ ಕಣ್ಣುಗಳೇ ಇಲ್ಲವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಅಸಮಾನತೆಯನ್ನು ಬಿತ್ತುವ ಜಾತಿ ಮೂಲದಿಂದ ಬಂದ ವೃತ್ತಿಗಳನ್ನು ಏಕೆ ಕಾಯಕ ಸಮಾಜಗಳು ಮಾಡಬೇಕು. ಸಾಮಾಜಿಕ ಪರಿವರ್ತನೆಯಾಗಬೇಕೆಂದರೆ ಕೂಡಲೇ ಆ ವೃತ್ತಿಗಳನ್ನು ತೊರೆಯಿರಿ ಎಂದು ಸಲಹೆ ನೀಡಿದರು.
ನರೇಂದ್ರ ಮೋದಿ ಅವರು ಖಾಸಗೀಕರಣದಿಂದ ದಲಿತರು, ಶ್ರಮಿಕರು ಹಾಗೂ ಅಸಹಾಯಕರನ್ನು ಕೊಲ್ಲುತ್ತಿದ್ದಾರೆ. ನಮಗೆ ಬೇಕಿರುವುದು ನೆಹರೂ ಅಂಥ ನಾಯಕತ್ವ. ಅವರು ಎಲ್ಲ ವಲಯಗಳನ್ನೂ ರಾಷ್ಟ್ರೀಕರಣ ಮಾಡಿ ಸಮಾಜಗಳಿಗೆ ನೆರವಾದರು. ಉದ್ಯೋಗ ಸೃಷ್ಟಿಸಿದರು. ಆದರೆ, ಮೋದಿ ಅವರು ಬಂಡವಾಳಶಾಹಿಗಳಿಗೆ ಮಾರಾಟಮಾಡಿ ವ್ಯವಸ್ಥೆಯನ್ನು ರಾಕ್ಷಸೀಕರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ 20 ಅಂಶಗಳ ಕಾರ್ಯಕ್ರಮ, ಉಳುವವನಿಗೆ ಭೂಮಿಯ ಒಡೆಯ ಮಾಡಿದರೆ, ಬಿಜೆಪಿ ಎಲ್ಲವನ್ನೂ ಮಾರುತ್ತಿದೆ. ₹ 6 ಸಾವಿರ ನೀಡಿ ಪ್ರತಿ ಮತ ಖರೀದಿಸುತ್ತೇನೆಂದು ಬೆಳಗಾವಿಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ ಎಂದರು.