ಮನೆ ರಾಜ್ಯ ಮೈಸೂರು: ನಟ ಚೇತನ್ ವಿರುದ್ಧ ` ಪೇ ಚೇತನ್’ ಅಭಿಯಾನ

ಮೈಸೂರು: ನಟ ಚೇತನ್ ವಿರುದ್ಧ ` ಪೇ ಚೇತನ್’ ಅಭಿಯಾನ

0

ಮೈಸೂರು(Mysuru): ನಟ ಚೇತನ್ ಅಹಿಂಸಾ ವಿರುದ್ಧ ಪೇ ಚೇತನ್ ಎಂಬ ಅಭಿಯಾನವನ್ನು ನಗರದ ರಾಷ್ಟ್ರೀಯ ಹಿಂದೂ ಸಮಿತಿ  ಆರಂಭಿಸಿದ್ದು, ಅಗ್ರಹಾರದ ಪ್ರಮುಖ ರಸ್ತೆ ಅಂಗಡಿಗೆ ತೆರಳಿ ಪೇ ಚೇತನ್ ಪೋಟೋ ಹಿಡಿದು ದೇಣಿಗೆ ಸಂಗ್ರಹಿಸಲಾಗುತ್ತಿದೆ.

ಕೆಲ ದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಬೆಂಬಲಿಸಿದ ಕಾರಣಕ್ಕಾಗಿ ಚೇತನ್ ನಮ್ಮ ದೇಶದಲ್ಲಿರಲು ಯೋಗ್ಯನಲ್ಲ ಆತನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕೆಂದು  ಈ ಅಭಿಯಾನ ಆರಂಭಿಸಲಾಗಿದೆ.

‘ಕಾಲೇಜ್ ಫೆಸ್ಟ್’ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಇದನ್ನು ಅವರು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕೆ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಇದು ಅಸಂಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರಂತೆ ಅವರು ನಮ್ಮ ಶತ್ರುಗಳಲ್ಲ. ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು ಎಂದು ಬರೆದಿದ್ದರು. ಸದ್ಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡು ತನಿಖೆ ನಡೆಸಿದ್ದಾರೆ.

ಹಿಂದಿನ ಲೇಖನಮೂಡಿಗೆರೆ: ಆನೆ ದಾಳಿಗೆ ಮಹಿಳೆ ಸಾವು- ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ
ಮುಂದಿನ ಲೇಖನಮದ್ದೂರು: ಹಣಕಾಸಿನ ವಿಚಾರಕ್ಕೆ ರೌಡಿ ಶೀಟರ್’ಗಳ ನಡುವೆ ಜಗಳ- ಕೊಲೆಯಲ್ಲಿ ಅಂತ್ಯ