ಮೈಸೂರು: ರಂಗಕರ್ಮಿ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಆಯಿಷ್) ಮೊದಲ ನಿರ್ದೇಶಕ ನ.ರತ್ನ (89) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು.
ಪತ್ನಿ ಲತಾ, ಪುತ್ರ, ಪುತ್ರಿ ಇದ್ದಾರೆ.
ತಮಿಳುನಾಡಿನ ಚಿದಂಬರಂನಲ್ಲಿ ಡಾ.ಎ.ಎಂ.ನಟೇಶ್– ವಿಠ್ಠೋಬಾಯಿ ಅಮ್ಮಾಳ್ ದಂಪತಿ ಪುತ್ರರಾಗಿ 1934ರ ಡಿ.12ರಂದು ಜನಿಸಿದ ಅವರು, ಮೈಸೂರು ಹಾಗೂ ಅಮೆರಿಕದಲ್ಲಿ ಶಿಕ್ಷಣ ಪಡೆದರು. ವಿಮರ್ಶಕ ಎ.ಕೆ.ರಾಮಾನುಜನ್, ಲೇಖಕ ಯು.ಆರ್.ಅನಂತಮೂರ್ತಿ ಅವರ ಒಡನಾಡಿಯಾಗಿದ್ದರು.
ಮಹಾರಾಜ ಕಾಲೇಜಿನಲ್ಲಿ 1950ರಲ್ಲಿ ಎಸ್ಎಸ್ಎಲ್ಸಿ, ಯುವರಾಜ ಕಾಲೇಜಿನಲ್ಲಿ ಇಂಟರ್ಮೀಡಿಯಟ್ (1952), ಮಹಾರಾಜ ಕಾಲೇಜಿನಲ್ಲಿ ಬಿ.ಎ. ಇಂಗ್ಲಿಷ್ ಆನರ್ಸ್ (1955), ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ನಲ್ಲಿ ಬಿ.ಇಡಿ ಪದವಿ ಪಡೆದ ನಂತರ ಉನ್ನತ ಶಿಕ್ಷಣಕ್ಕೆ ಅಮೆರಿಕಕ್ಕೆ ತೆರಳಿದ್ದರು. ನ್ಯೂಯಾರ್ಕ್ನ ಹಂಟರ್ ವಿಶ್ವವಿದ್ಯಾಲಯ, ಇಂಡಿಯಾನಾ ವಿಶ್ವವಿದ್ಯಾಲಯದಲ್ಲಿ ವಾಕ್ ಮತ್ತು ಶ್ರವಣದಲ್ಲಿ ಎಂ.ಎಸ್ ಹಾಗೂ ಡಾಕ್ಟರೇಟ್ ಪದವಿ ಪಡೆದು, ಅಲ್ಲಿಯೇ ಅಧ್ಯಾಪಕರಾಗಿದ್ದರು.
1966ರಲ್ಲಿ ಆಯಿಷ್ ಸ್ಥಾಪನೆಯಾದಾಗ ಮೊದಲ ನಿರ್ದೇಶಕರಾಗಿ ನೇಮಕಗೊಂಡ ಅವರು 1989ರವರೆಗೂ ಸೇವೆ ಸಲ್ಲಿಸಿದರು. 1985–87ರಲ್ಲಿ ಅಲಿ ಯವರ್ ಜಂಗ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹಿಯರಿಂಗ್ ಹ್ಯಾಂಟಿಕ್ಯಾಪ್ಟ್ನ ನಿರ್ದೇಶಕರಾಗಿದ್ದರು.
‘ಸಮತೆಂತೋ’ ರಂಗತಂಡ ಸ್ಥಾಪಿಸಿ ಮೂಲಕ ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಅವರು ಎಲ್ಲಿಗೆ ಮತ್ತು ಇತರ ಕತೆಗಳು, ಬೊಂತೆ, ಗೋಡೆ ಬೇಕೆ ಗೋಡೆ ಮೊದಲಾದ ನಾಟಕಗಳನ್ನು ರಚಿಸಿದ್ದಾರೆ. ಪುನರ್ಜನ್ಮ, ಭಿನ್ನ ಬೆನಕ,ಬೋಳಾಚಾರಿಗೆ ನಮನ ಮೊದಲಾದ ರೇಡಿಯೊ ನಾಟಕಗಳನ್ನು ರಚಿಸಿದ್ದಾರೆ. 50ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇದೇ ಏಪ್ರಿಲ್ನಲ್ಲಿ ಪ್ರದರ್ಶನಗೊಂಡ ‘ಅಯಾನ್ ಶಾಂತಿ ಕುಟೀರ’ ನಾಟಕದಲ್ಲೂ ವ್ಹೀಲ್ಚೇರ್ನಲ್ಲಿ ಕುಳಿತು ಪಾತ್ರ ನಿರ್ವಹಿಸಿದ್ದರು.
2005ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, 2013ರಲ್ಲಿ ರಾಜ್ಯೋತ್ಸವ, ಎಂ.ಎನ್.ರಾಯ್ ಪ್ರಶಸ್ತಿ, ಬಿ.ವಿ. ಕಾರಂತ ಪ್ರಶಸ್ತಿ, ಹೆಲನ್ ಕೆಲರ್ ಪ್ರಶಸ್ತಿ ದೊರೆತಿವೆ.
ಸರಸ್ವತಿಪುರಂನ ಜೋಡಿ ರಸ್ತೆಯಲ್ಲಿರುವ ನಿವಾಸ ’ಮಹಾಮನೆ’ಯಲ್ಲಿ ಮಧ್ಯಾಹ್ನ 1ಗಂಟೆಗೆ ಪಾರ್ಥೀವ ಶರೀರದ ಅಂತಿಮ ದರ್ಶನವಿದ್ದು, ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.