ಮನೆ ಸ್ಥಳೀಯ ಇ-ಖಾತೆ ವಿತರಣೆಯಲ್ಲಿ ರಾಜ್ಯದಲ್ಲಿ ಮೈಸೂರಿಗೆ ಎರಡನೇ ಸ್ಥಾನ

ಇ-ಖಾತೆ ವಿತರಣೆಯಲ್ಲಿ ರಾಜ್ಯದಲ್ಲಿ ಮೈಸೂರಿಗೆ ಎರಡನೇ ಸ್ಥಾನ

0

ಮೈಸೂರು : ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆ ಕಚೇರಿ-೧ ಮತ್ತು ೨ರಲ್ಲಿ ಶಾಸಕ ಶ್ರೀವತ್ಸ ಅವರು ೨೫೦ಕ್ಕೂ ಹೆಚ್ಚು ಮಂದಿಗೆ ಇ-ಖಾತೆ ಪತ್ರ ಹಂಚಿಕೆ ಮಾಡಿದರು.

ನಗರದ ವಲಯ ಕಚೇರಿ-೧ರಲ್ಲಿ ಇ-ಖಾತೆ ಹಂಚಿಕೆ ಮಾಡಿ ಮಾತನಾಡಿದ ಅವರು, ಆಯುಕ್ತ ತನ್ವೀರ್ ಅವರು ಆಯುಕ್ತರಾಗಿ ಬಂದ ನಂತರ ಸಾರ್ವಜನಿಕರಿಗೆ ಇ-ಖಾತೆ ಹಂಚಿಕೆಯ ವೇಗ ಹೆಚ್ಚಾಗಿದ್ದು, ವಲಯ ಕಚೇರಿಗಳ ಆಯುಕ್ತರುಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ಕೊಟ್ಟು ಖಾತೆ ವಿತರಣೆ ಮಾಡಿಸುತ್ತಿರುವುದರಿಂದ ರಾಜ್ಯದಲ್ಲಿ ಮೈಸೂರು ಜಿಲ್ಲೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಹೇಳಿದರು.

ಆಯುಕ್ತ ತನ್ವೀರ್ ಅವರು ಮಾತನಾಡಿ, ವಲಯ ಕಚೇರಿ-೧ರ ಸಹಾಯಕ ಆಯುಕ್ತರು ೭/೧೦ ದಿನಗಳಲ್ಲಿ ಇ-ಖಾತೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಗತ್ಯ ದಾಖಲೆ ನೀಡಿ ಸಾರ್ವಜನಿಕರು ಸಹಕರಿಸಿ. ಈಗಾಗಲೇ ೪೫ ದಿನಗಳಲ್ಲಿ ೯ ಸಾವಿರ ಇ-ಖಾತೆ ವಿತರಿಸಲಾಗಿದೆ. ಈ ವಲಯದಲ್ಲಿ ಪ್ರತೀ ತಿಂಗಳು ೮೦೦/೯೦೦ ಖಾತೆ ವಿತರಿಸುವ ಮೂಲಕ ಗುರಿ ಮುಟ್ಟಬೇಕಿದೆ. ಸಾರ್ವಜನಿಕರು ದಾಖಲೆ ನೀಡಿ ಪಡೆದುಕೊಳ್ಳಿ ಎಂದರು. ಸ್ವಚ್ಛ ಸರ್ವೇಕ್ಷಣ್ ನಡೆಯುತ್ತಿದೆ. ಈ ಸಾಲಿನಲ್ಲಿ ಮೈಸೂರು ನಗರ ೧ನೇ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದೆ. ಸಾರ್ವಜನಿಕರು ನಿಮ್ಮ ದೂರವಾಣಿಗಳ ಮೂಲಕ ಈ ವಿಚಾರವಾಗಿ ಹೆಚ್ಚು ಪ್ರಚಾರ ಮಾಡುವ ಮೂಲಕ ಸಹಕರಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪ ಆಯುಕ್ತ(ಕಂದಾಯ) ಸೋಮಶೇಖರ್, ವಲಯ-೧ರ ಸಹಾಯಕ ಆಯುಕ್ತ ಮನನ ಮಂಜುನಾಥ ರೆಡ್ಡಿ, ಕಂದಾಯಾಧಿಕಾರಿ ಸ್ವರ್ಣಲತಾ, ಸಹಾಯಕ ಕಂದಾಯಾಧಿಕಾರಿ ಪ್ರತಾಪ್ ಮುಂತಾದವರು ಉಪಸ್ಥಿತರಿದ್ದರು.

೧೦೦ ಇ-ಖಾತೆ ವಿತರಣೆ: ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-೨ರಲ್ಲಿಯೂ ಶಾಸಕ ಶ್ರೀವತ್ಸ ಈ ಭಾಗದ ೧೦೦ ಮಂದಿ ಸಾರ್ವಜನಿಕರಿಗೆ ಇ- ವಿತರಿಸಿದರು. ನಂತರ ಮಾತನಾಡಿದ ಅವರು, ಅತ್ಯಂತ ಸಾಧಾರಣವಾದ ನಿಮ್ಮಲ್ಲಿ ಈಗಾಗಲೇ ಇರುವ ದಾಖಲಾತಿಗಳಾದ ಟೈಟಲ್ ಡೀಡ್, ರಿಜಿಸ್ಟ್ರೇಷನ್ ಪ್ರತಿ, ಇಸಿ, ಆಸ್ತಿಯ ಛಾಯಾಚಿತ್ರ, ಪಾಸ್ ಪೋರ್ಟ್ ಫೋಟೋ, ತೆರಿಗೆ ಪಾವತಿಸಿರುವ ರಸೀದಿ, ಐಡಿ ದಾಖಲೆ ಇವಿಷ್ಟು ದಾಖಲೆ ನೀಡಿ ಇ-ಖಾತೆ ಪಡೆದುಕೊಳ್ಳಿ ಎಂದು ಹೇಳಿದರು