ಮನೆ ಸುದ್ದಿ ಜಾಲ ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ ಕಾರ್ಯಕ್ರಮಕ್ಕೆ ಎಸ್.ಟಿ.ಸೋಮಶೇಖರ್ ಚಾಲನೆ

ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ ಕಾರ್ಯಕ್ರಮಕ್ಕೆ ಎಸ್.ಟಿ.ಸೋಮಶೇಖರ್ ಚಾಲನೆ

0

ಮೈಸೂರು(Mysuru): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ್ ಅಂಗವಾಗಿ ಹಮ್ಮಿಕೊಂಡಿದ್ದ “ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ” ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.

ಮೈಸೂರು ನಗರದಲ್ಲಿ ಸ್ವಚ್ಚತೆ ಕಾಪಾಡಲು ಹಮ್ಮಿಕೊಂಡಿರುವ ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ರವಾಸಿ ತಾಣಗಳನ್ನು ಕಸ ಮುಕ್ತಗೊಳಿಸಬೇಕು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಈ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಚಿವರು ಕರೆ ಕೊಟ್ಟರು.

ಕಾರ್ಯಕ್ರಮದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದಿನ ಲೇಖನಪ್ರಧಾನಿ ಮೋದಿ ಜನ್ಮದಿನ: ಗಣ್ಯರಿಂದ ಶುಭಾಶಯ
ಮುಂದಿನ ಲೇಖನಒಂದೇ ತಿಂಗಳಲ್ಲಿ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ