ಮನೆ ರಾಷ್ಟ್ರೀಯ ಉದ್ದವ್ ಠಾಕ್ರೆ, ಸಂಜಯ್ ರಾವುತ್ ಗೆ ಮಂಪರು ಪರೀಕ್ಷೆ ನಡೆಸಿದರೆ ನಟ ಸುಶಾಂತ್ ಸಿಂಗ್ ಸಾವಿನ...

ಉದ್ದವ್ ಠಾಕ್ರೆ, ಸಂಜಯ್ ರಾವುತ್ ಗೆ ಮಂಪರು ಪರೀಕ್ಷೆ ನಡೆಸಿದರೆ ನಟ ಸುಶಾಂತ್ ಸಿಂಗ್ ಸಾವಿನ ರಹಸ್ಯ ಬಯಲು

0

ಮುಂಬೈ(Mumbai): ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಅವರ ಮಗ ಆದಿತ್ಯ ಠಾಕ್ರೆ, ಸಚಿವ ಸಂಜಯ್ ರಾವುತ್ ಅವರಿಗೆ ಮಂಪರು ಪರೀಕ್ಷೆ ನಡೆಸಿದರೆ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ಸಾವಿನ ರಹಸ್ಯ ಬಯಲಾಗಲಿದೆ ಎಂದು ಬಿಹಾರದ ಬಿಜೆಪಿ ನಾಯಕ ನಿಖಿಲ್ ಆನಂದ್ ಗಂಭೀರ ಆರೋಪ ಮಾಡಿದ್ದಾರೆ.

ಮಹಾರಾಷ್ಟ್ರದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸುಶಾಂತ್, ದಿಶಾ ಸಾವಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಮಾಡಿರಬಹುದು ಎಂದು ಆರೋಪಿಸಿದ್ದಾರೆ.

ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಮತ್ತು ಸಂಜಯ್ ರಾವುತ್ ವಿರುದ್ಧ ಸಾಕ್ಷಿ ಸಂಗ್ರಹಿಸುವಲ್ಲಿ ಸಿಬಿಐ ವಿಫಲವಾಗಿರಬಹುದು. ಆದರೆ, ಅವರು ಮಾಡಿರುವ ತಪ್ಪು ದೇವರಿಗೆ ತಿಳಿದಿದೆ. ಅವರನ್ನು ಶಿಕ್ಷಿಸಿ, ರಜಪೂತ್ ಮತ್ತು ಸಾಲಿಯಾನ್‌ಗೆ ನ್ಯಾಯ ಒದಗಿಸುವಂತೆ ದೇವರನ್ನು ಪ್ರಾರ್ಥಿಸಿತ್ತೇನೆ  ಎಂದು ಅವರು ಹೇಳಿದ್ದಾರೆ.

ಜುಲೈ 14,2020ರಲ್ಲಿ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಫ್ಲ್ಯಾಟ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದರು. ಇದಕ್ಕೂ 6 ದಿನಗಳ ಮೊದಲು ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್, ಮುಂಬೈನ ಮಲಾಡ್ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ಮೃತಪಟ್ಟಿದ್ದರು.

ಹಿಂದಿನ ಲೇಖನಸಚಿವ ಉಮೇಶ್ ಕತ್ತಿ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಡಿಕೆಶಿ ಆಗ್ರಹ
ಮುಂದಿನ ಲೇಖನಚಾಮರಾಜನಗರದ ಹುಂಡಿಪುರ ಗ್ರಾಮದಲ್ಲಿ ಸ್ಮಾರ್ಟ್‌, ಡಿಜಿಟಲ್ ಗ್ರಂಥಾಲಯ ಸ್ಥಾಪನೆ